ಮಂಗಳೂರು: ಪ್ರಜಾಪ್ರಭುತ್ವ ದೇಶದಲ್ಲಿ, ಪ್ರಜೆಗಳು ನಿರ್ಧಿಷ್ಟ ಭಕ್ಷಣ ಸೇವಿಸಬೇಕು, ನಿರ್ಧಿಷ್ಟ ಉಡುಪು ಧರಿಸಬೇಕು, ನಿರ್ಧಿಷ್ಟ ರೀತಿಯಲ್ಲಿಯೇ ಆಹಾರ ತಯಾರಿ ನಡೆಸಬೇಕು ಎಂದು ಫರ್ಮಾನು ಹೊರಡಿಸಲು ನಾವು ಕೊಲೊನಿಯಲ್ ಸಾಮ್ರಾಜ್ಯದಲ್ಲಿ ಜೀವಿಸುತ್ತಿಲ್ಲ.
ವಿವಿಧತೆ ಯಲ್ಲಿ ಏಕತೆ ಪ್ರತಿಪಾದಿಸಿದ ಡಾ.ಅಂಬೇಡ್ಕರ್, ನಾರಾಯಣ ಗುರು ಸ್ವಾಮಿ, ಸ್ವಾಮಿ ವಿವೇಕಾನಂದರು, ಬಸವಣ್ಣ, ತಿರುವಳ್ಳುವರ್, ಮಹಾತ್ಮ ಜ್ಯೋತಿ ಭಾಪುಳೆ , ಮಹಾತ್ಮ ಗಾಂಧಿ, ದೇವರಾಜ ಅರಸು ಅವರಂತಹ ಸಾಮಾಜಿಕ ಹೋರಾಟಗಾರರು ಜೀವಿಸಿದ ನೆಲದಲ್ಲಿ ಬದುಕುತ್ತಿದ್ದೇವೆ. ಭಾರತದ ಮೂಲ ನಿವಾಸಿಗಳು ನಿಸರ್ಗ ಲಭ್ಯ ಆಹಾರ ಸೇವಿಸಿ ಉತ್ತಮ ನಾಗರಿಕ ಬದುಕು ರೂಪಿಸಲು ನಮಗೆ ಕಲಿಸಿ ಕೊಟ್ಟಿದ್ದಾರೆ. ಜನರು ಹಸಿವು ನೀಗಿಸಲು ಯಾವ ಆಹಾರ , ಹೇಗೆ ತಯಾರಿಸಬೇಕು ಎಂದು ಆರ್ಯರಿಂದ ಕಲಿತು ಕೊಳ್ಳುವ ಗತಿಗೇಡು ನಾಡಿನ ಮಣ್ಣಿನ ನಾಗರಿಕರಿಗೆ ಬರಲಿಲ್ಲ.
ಆದುದರಿಂದ ಭಾರತದ ಮುಸ್ಲಿಮರು ಹುಟ್ಟಿನಿಂದ ಸಾಯುವವರೆಗೆ ಹಲಾಲ್ ಗೊಳಿಸಿದ ಶುದ್ಧ ಆಹಾರ, ಮಾಂಸ, ಕೋಳಿ, ಕೋಣಗಳನ್ನು ಭಕ್ಷಿಸಲಿದ್ದಾರೆ. ಮತ್ತು ತಮ್ಮ ಆರೋಗ್ಯವನ್ನು ಸಮರ್ಥವಾಗಿ ಸಂರಕ್ಷಿಸಲು ಬದ್ಧರು. ಈ ಬಗ್ಗೆ ಇತರರು ಚಿಂತಿಸುವ ಅಗತ್ಯವಿಲ್ಲ. ಮುಸ್ಲಿಮರ ಆಹಾರ ಪದ್ಧತಿಯನ್ನು ಇತರರು ನಿರ್ಧರಿಸುವ ವ್ಯರ್ಥ ಹೊಣೆಗಾರಿಕೆ ಕೂಡಾ ಇತರರಿಗೆ ಅಗತ್ಯ ವಿಲ್ಲ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.







