ಮಂಗಳೂರು: ಪ್ರಜಾಪ್ರಭುತ್ವ ದೇಶದಲ್ಲಿ, ಪ್ರಜೆಗಳು ನಿರ್ಧಿಷ್ಟ ಭಕ್ಷಣ ಸೇವಿಸಬೇಕು, ನಿರ್ಧಿಷ್ಟ ಉಡುಪು ಧರಿಸಬೇಕು, ನಿರ್ಧಿಷ್ಟ ರೀತಿಯಲ್ಲಿಯೇ ಆಹಾರ ತಯಾರಿ ನಡೆಸಬೇಕು ಎಂದು ಫರ್ಮಾನು ಹೊರಡಿಸಲು ನಾವು ಕೊಲೊನಿಯಲ್ ಸಾಮ್ರಾಜ್ಯದಲ್ಲಿ ಜೀವಿಸುತ್ತಿಲ್ಲ.
ವಿವಿಧತೆ ಯಲ್ಲಿ ಏಕತೆ ಪ್ರತಿಪಾದಿಸಿದ ಡಾ.ಅಂಬೇಡ್ಕರ್, ನಾರಾಯಣ ಗುರು ಸ್ವಾಮಿ, ಸ್ವಾಮಿ ವಿವೇಕಾನಂದರು, ಬಸವಣ್ಣ, ತಿರುವಳ್ಳುವರ್, ಮಹಾತ್ಮ ಜ್ಯೋತಿ ಭಾಪುಳೆ , ಮಹಾತ್ಮ ಗಾಂಧಿ, ದೇವರಾಜ ಅರಸು ಅವರಂತಹ ಸಾಮಾಜಿಕ ಹೋರಾಟಗಾರರು ಜೀವಿಸಿದ ನೆಲದಲ್ಲಿ ಬದುಕುತ್ತಿದ್ದೇವೆ. ಭಾರತದ ಮೂಲ ನಿವಾಸಿಗಳು ನಿಸರ್ಗ ಲಭ್ಯ ಆಹಾರ ಸೇವಿಸಿ ಉತ್ತಮ ನಾಗರಿಕ ಬದುಕು ರೂಪಿಸಲು ನಮಗೆ ಕಲಿಸಿ ಕೊಟ್ಟಿದ್ದಾರೆ. ಜನರು ಹಸಿವು ನೀಗಿಸಲು ಯಾವ ಆಹಾರ , ಹೇಗೆ ತಯಾರಿಸಬೇಕು ಎಂದು ಆರ್ಯರಿಂದ ಕಲಿತು ಕೊಳ್ಳುವ ಗತಿಗೇಡು ನಾಡಿನ ಮಣ್ಣಿನ ನಾಗರಿಕರಿಗೆ ಬರಲಿಲ್ಲ.
ಆದುದರಿಂದ ಭಾರತದ ಮುಸ್ಲಿಮರು ಹುಟ್ಟಿನಿಂದ ಸಾಯುವವರೆಗೆ ಹಲಾಲ್ ಗೊಳಿಸಿದ ಶುದ್ಧ ಆಹಾರ, ಮಾಂಸ, ಕೋಳಿ, ಕೋಣಗಳನ್ನು ಭಕ್ಷಿಸಲಿದ್ದಾರೆ. ಮತ್ತು ತಮ್ಮ ಆರೋಗ್ಯವನ್ನು ಸಮರ್ಥವಾಗಿ ಸಂರಕ್ಷಿಸಲು ಬದ್ಧರು. ಈ ಬಗ್ಗೆ ಇತರರು ಚಿಂತಿಸುವ ಅಗತ್ಯವಿಲ್ಲ. ಮುಸ್ಲಿಮರ ಆಹಾರ ಪದ್ಧತಿಯನ್ನು ಇತರರು ನಿರ್ಧರಿಸುವ ವ್ಯರ್ಥ ಹೊಣೆಗಾರಿಕೆ ಕೂಡಾ ಇತರರಿಗೆ ಅಗತ್ಯ ವಿಲ್ಲ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?