ಬೆಂಗಳೂರು,ಏ.2: ಚಂದ್ರದರ್ಶನ ಹಿನ್ನೆಲೆಯಲ್ಲಿ ರಾಜ್ಯದ ಬೆಂಗಳೂರಿನಲ್ಲಿ (ಏ.3)ನಾಳೆಯಿಂದ ರಂಜಾನ್ ಉಪವಾಸ ಆರಂಭಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡೀರುವ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶಾಫಿ ಸಅದಿಯವರು, ಏಪ್ರಿಲ್ 3 ರಂದು ರಂಜಾನ್ ತಿಂಗಳ ಪ್ರಥಮ ದಿನವಾಗಿದ್ದು, ಕಡ್ಡಾಯ ವೃತವನ್ನು ನಾಳೆಯಿಂದ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲೂ ನಾಳೆಯಿಂದ ಉಪವಾಸ ಆರಂಭ
ಮಂಗಳೂರು,ಏ.2: ಇಂದು ( ಶನಿವಾರ ಅಸ್ತ ಆದಿತ್ಯವಾರ ) ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ 03 – 04 – 2022 ಆದಿತ್ಯವಾರದಿಂದ ( ನಾಳೆಯಿಂದ ) ರಮಳಾನ್ ಉಪವಾಸ ಪ್ರಾರಂಭವಾಗಿರುತ್ತದೆ ಎಂದು ಉಳ್ಳಾಲ ಹಾಗು ದ.ಕ ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿ ಗೌರವಾನ್ವಿತ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
ಅದೇ ರೀತಿ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಾಳೆ ರಂಜಾನ್ ಉಪವಾಸವೆಂದು ಘೋಷಿಸಿದ್ದಾರೆ.
ಆದಿತ್ಯವಾರ ಉಪವಾಸ ಆಚರಿಸುವುದಾಗಿ ಉಡುಪಿ, ಚಿಕ್ಕಮಗಳೂರು, ಹಾಗೂ ಹಾಸನ ಜಿಲ್ಲೆಗಳ ಸಂಯುಕ್ತ ಜಮಾಅತ್ ಖಾಝಿ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ