ಬೆಂಗಳೂರು,ಏ.2: ಚಂದ್ರದರ್ಶನ ಹಿನ್ನೆಲೆಯಲ್ಲಿ ರಾಜ್ಯದ ಬೆಂಗಳೂರಿನಲ್ಲಿ (ಏ.3)ನಾಳೆಯಿಂದ ರಂಜಾನ್ ಉಪವಾಸ ಆರಂಭಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡೀರುವ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶಾಫಿ ಸಅದಿಯವರು, ಏಪ್ರಿಲ್ 3 ರಂದು ರಂಜಾನ್ ತಿಂಗಳ ಪ್ರಥಮ ದಿನವಾಗಿದ್ದು, ಕಡ್ಡಾಯ ವೃತವನ್ನು ನಾಳೆಯಿಂದ ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲೂ ನಾಳೆಯಿಂದ ಉಪವಾಸ ಆರಂಭ
ಮಂಗಳೂರು,ಏ.2: ಇಂದು ( ಶನಿವಾರ ಅಸ್ತ ಆದಿತ್ಯವಾರ ) ರಾತ್ರಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ 03 – 04 – 2022 ಆದಿತ್ಯವಾರದಿಂದ ( ನಾಳೆಯಿಂದ ) ರಮಳಾನ್ ಉಪವಾಸ ಪ್ರಾರಂಭವಾಗಿರುತ್ತದೆ ಎಂದು ಉಳ್ಳಾಲ ಹಾಗು ದ.ಕ ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿ ಗೌರವಾನ್ವಿತ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.
ಅದೇ ರೀತಿ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮೊಹಲ್ಲಾಗಳ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ನಾಳೆ ರಂಜಾನ್ ಉಪವಾಸವೆಂದು ಘೋಷಿಸಿದ್ದಾರೆ.
ಆದಿತ್ಯವಾರ ಉಪವಾಸ ಆಚರಿಸುವುದಾಗಿ ಉಡುಪಿ, ಚಿಕ್ಕಮಗಳೂರು, ಹಾಗೂ ಹಾಸನ ಜಿಲ್ಲೆಗಳ ಸಂಯುಕ್ತ ಜಮಾಅತ್ ಖಾಝಿ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ