ದುಬೈ: ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯವಿದ್ರಾವಕ ಘಟನೆಯೊಂದು ಭಾರತದ ಕಾಶ್ಮೀರದಲ್ಲಿ ನಡೆದಿರುವುದು ಖಂಡನೀಯ.
ಜಮ್ಮು ಕಾಶ್ಮೀರದ ಕಾಥುವಾ ಎಂಬಲ್ಲಿ ಎಂಟು ವರ್ಷ ಪ್ರಾಯದ ಆಸಿಫಾ ಎಂಬ ಮುಗ್ದ ಬಾಲಕಿಯನ್ನು ಅಪಹರಿಸಿ ಬಾಲಾಪರಾಧಿ ಸಹಿತ ಉನ್ನತ ಪೋಲೀಸ್ ಅಧಿಕಾರಿಗಳನ್ನೊಳಗೊಂಡು ನಾಲ್ಕು ಜನರ ತಂಡವು ಏಳು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆಯು ಭಾರತವನ್ನು ತಲೆತಗ್ಗಿಸುವಂತೆ ಮಾಡಿದೆ.
ತನ್ನ ಗ್ರಾಮದಲ್ಲಿನ ಕಾಡು ಪ್ರದೇಶಕ್ಕೆ ಕುದುರೆಯನ್ನು ಮೇಯಿಸಲು ಹೋಗಿದ್ದ ಆಸಿಫಾಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆಗೈದ ಕಾಮ-ನರ ಪಿಶಾಚಿಗಳು ಮಾನವ ಸಮೂಹಕ್ಕೆ ಕಂಠಕ. ಪವಿತ್ರ ಆರಾಧನಾಲಯದಲ್ಲಿ ಆ ಮುಗ್ದ ಮಗುವನ್ನು ಸತತ ಏಳು ದಿನಗಳ ಕಾಲ ನಿದ್ದೆ ಮಾತ್ರೆ ನೀಡಿ , ಆಹಾರ ನೀಡದೆ ದೈಹಿಕವಾಗಿ ಕಿರುಕುಳ ನೀಡಿ ಸಾಮೂಹಿಕವಾಗಿ ಅತ್ಯಾಚಾರಗೈದು ಮೃಗೀಯವಾಗಿ ಕೊಲೆಗೈದ ಕಿರಾತಕರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿ ಕೂಡಲೇ ನೇಣುಗಂಬಕ್ಕೆ ಏರಿಸುವಂತೆ ಸರ್ವ ಭಾರತೀಯರ ಅಭಿಲಾಷೆಯೂ, ಒತ್ತಾಯವೂ ಆಗಿದೆ.
ಈ ನಿಟ್ಟಿನಲ್ಲಿ ಕೆಸಿಎಫ್ ಯುಎಇ ಯು ತೀವ್ರ ಸಂತಾಪ ವ್ಯಕ್ತಪಡಿಸಿ ಆಸಿಫಾಲ ಪಾರತ್ರಿಕ ಮೋಕ್ಷಕ್ಕಾಗಿ ಹಾಗೂ ಆಕೆಯ ಕುಟುಂಬಕ್ಕೆ ಕ್ಷಮೆ ನೀಡಲು ಪ್ರಾರ್ಥಿಸಿ ನರ-ಕಾಮ ಪಿಶಾಚಿ ಕುಟುಕರಿಗೆ ಅತೀ ಶೀಘ್ರವಾಗಿ ಶಿಕ್ಷೆಯನ್ನು ವಿಧಿಸುವಂತಾಗಲಿ ಎಂದು ಪ್ರಾರ್ಥಿಸಿದರು.
ನರ ಹಂತಕರಿಗೆ ಸಾಥ್ ನೀಡುವ ಶಕ್ತಿಗಳನ್ನು ತರಾಟೆಗೆ ತೆಗೆದ ಕೆಸಿಎಫ್ ಯುಎಇ ಶೀಘ್ರವೇ ನರಹಂತಕರು ನೇಣುಗಂಬಕ್ಕೆ ಏರುವಂತಾಗಲಿ ಎಂದು ಆಶಿಸಿತು.
ಆಸಿಫಾ ಪ್ರಕರಣವು ಇಡೀ ಮಾನವ ಕುಲವೇ ತಲೆತಗ್ಗಿಸುವಂತಹ ಪ್ರಕರಣವಾಗಿದೆ. ಇದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಕೆಸಿಎಫ್ ಯುಎಇ ಆಸಿಫಾಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಭಾರತ ಸರಕಾರದಲ್ಲಿ ಮನವಿ ಮಾಡಿಕೊಂಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು