ದುಬೈ: ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯವಿದ್ರಾವಕ ಘಟನೆಯೊಂದು ಭಾರತದ ಕಾಶ್ಮೀರದಲ್ಲಿ ನಡೆದಿರುವುದು ಖಂಡನೀಯ.
ಜಮ್ಮು ಕಾಶ್ಮೀರದ ಕಾಥುವಾ ಎಂಬಲ್ಲಿ ಎಂಟು ವರ್ಷ ಪ್ರಾಯದ ಆಸಿಫಾ ಎಂಬ ಮುಗ್ದ ಬಾಲಕಿಯನ್ನು ಅಪಹರಿಸಿ ಬಾಲಾಪರಾಧಿ ಸಹಿತ ಉನ್ನತ ಪೋಲೀಸ್ ಅಧಿಕಾರಿಗಳನ್ನೊಳಗೊಂಡು ನಾಲ್ಕು ಜನರ ತಂಡವು ಏಳು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೆಗೈದ ಘಟನೆಯು ಭಾರತವನ್ನು ತಲೆತಗ್ಗಿಸುವಂತೆ ಮಾಡಿದೆ.
ತನ್ನ ಗ್ರಾಮದಲ್ಲಿನ ಕಾಡು ಪ್ರದೇಶಕ್ಕೆ ಕುದುರೆಯನ್ನು ಮೇಯಿಸಲು ಹೋಗಿದ್ದ ಆಸಿಫಾಳನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆಗೈದ ಕಾಮ-ನರ ಪಿಶಾಚಿಗಳು ಮಾನವ ಸಮೂಹಕ್ಕೆ ಕಂಠಕ. ಪವಿತ್ರ ಆರಾಧನಾಲಯದಲ್ಲಿ ಆ ಮುಗ್ದ ಮಗುವನ್ನು ಸತತ ಏಳು ದಿನಗಳ ಕಾಲ ನಿದ್ದೆ ಮಾತ್ರೆ ನೀಡಿ , ಆಹಾರ ನೀಡದೆ ದೈಹಿಕವಾಗಿ ಕಿರುಕುಳ ನೀಡಿ ಸಾಮೂಹಿಕವಾಗಿ ಅತ್ಯಾಚಾರಗೈದು ಮೃಗೀಯವಾಗಿ ಕೊಲೆಗೈದ ಕಿರಾತಕರನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಿ ಕೂಡಲೇ ನೇಣುಗಂಬಕ್ಕೆ ಏರಿಸುವಂತೆ ಸರ್ವ ಭಾರತೀಯರ ಅಭಿಲಾಷೆಯೂ, ಒತ್ತಾಯವೂ ಆಗಿದೆ.
ಈ ನಿಟ್ಟಿನಲ್ಲಿ ಕೆಸಿಎಫ್ ಯುಎಇ ಯು ತೀವ್ರ ಸಂತಾಪ ವ್ಯಕ್ತಪಡಿಸಿ ಆಸಿಫಾಲ ಪಾರತ್ರಿಕ ಮೋಕ್ಷಕ್ಕಾಗಿ ಹಾಗೂ ಆಕೆಯ ಕುಟುಂಬಕ್ಕೆ ಕ್ಷಮೆ ನೀಡಲು ಪ್ರಾರ್ಥಿಸಿ ನರ-ಕಾಮ ಪಿಶಾಚಿ ಕುಟುಕರಿಗೆ ಅತೀ ಶೀಘ್ರವಾಗಿ ಶಿಕ್ಷೆಯನ್ನು ವಿಧಿಸುವಂತಾಗಲಿ ಎಂದು ಪ್ರಾರ್ಥಿಸಿದರು.
ನರ ಹಂತಕರಿಗೆ ಸಾಥ್ ನೀಡುವ ಶಕ್ತಿಗಳನ್ನು ತರಾಟೆಗೆ ತೆಗೆದ ಕೆಸಿಎಫ್ ಯುಎಇ ಶೀಘ್ರವೇ ನರಹಂತಕರು ನೇಣುಗಂಬಕ್ಕೆ ಏರುವಂತಾಗಲಿ ಎಂದು ಆಶಿಸಿತು.
ಆಸಿಫಾ ಪ್ರಕರಣವು ಇಡೀ ಮಾನವ ಕುಲವೇ ತಲೆತಗ್ಗಿಸುವಂತಹ ಪ್ರಕರಣವಾಗಿದೆ. ಇದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಕೆಸಿಎಫ್ ಯುಎಇ ಆಸಿಫಾಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಭಾರತ ಸರಕಾರದಲ್ಲಿ ಮನವಿ ಮಾಡಿಕೊಂಡಿದೆ.
ಇನ್ನಷ್ಟು ಸುದ್ದಿಗಳು
ಸ್ವತಂತ್ರ ಪ್ಯಾಲಸ್ತೀನ್ ನಿರ್ಮಾಣಗೊಳ್ಳದೆ ಇಸ್ರೇಲ್ ಜೊತೆ ಶಾಂತಿ ಒಪ್ಪಂದಕ್ಕಿಲ್ಲ- ಸೌದಿ ಅರೇಬಿಯಾ
ಸೌದಿ: ಖಾಸಗಿ ವಲಯದಲ್ಲೂ ವಾರದಲ್ಲಿ ಎರಡು ದಿನಗಳ ರಜೆ
ದುಬೈನಲ್ಲಿ ಕೋವಿಡ್ ಹೆಚ್ಚಳ: ಪ್ರವಾಸೋದ್ಯಮ,ಮನರಂಜನೆಗೆ ನಿರ್ಬಂಧ
ಉಮ್ರಾ ಯಾತ್ರಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯ- ಸೌದಿ ಹಜ್, ಉಮ್ರಾ ಸಚಿವ
ಸೌದಿ: ಒಂದೇ ವಾರದಲ್ಲಿ 20 ಸಾವಿರ ಕೋವಿಡ್ ಪ್ರೋಟೋಕಾಲ್ ಉಲ್ಲಂಘನೆ
ಇಸ್ರೇಲ್- ಯುಎಇ ವೀಸಾ ರಹಿತ ಪ್ರಯಾಣ ಒಪ್ಪಂದ ರದ್ದು