ಬೆಂಗಳೂರು: ಏಪ್ರಿಲ್ 05:ದೇವಸ್ಥಾನ, ಮಸೀದಿ, ಚರ್ಚು ಹೀಗೆ ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಮಸೀದಿಗಳಲ್ಲಿನ ಧ್ವನಿವರ್ಧಕ ಬಳಕೆಗೆ ವಿರೋಧ ವ್ಯಕ್ತವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಎಲ್ಲಾ ಬೆಳವಣಿಗೆಗಳು ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿಗಳು ಮೌನವಾಗಿರುವುದಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಆರ್.ಎಸ್.ಎಸ್ ಮತ್ತು ಭಜರಂಗದಳ ಸರ್ಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರ್ಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಸೀದಿಗಳಲ್ಲಿನ ಧ್ವನಿವರ್ಧಕ ಬಳಕೆಗೆ ವಿರೋಧ ಹೀಗೆ ಇನ್ನಿತರ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ. ಸಮಾಜದ ಕೋಮು ಸಾಮರಸ್ಯ ಹಾಳುಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಇದು ನಿಮಗೆ ಮುಂದೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)