ಬೆಂಗಳೂರು: ಏಪ್ರಿಲ್ 05:ದೇವಸ್ಥಾನ, ಮಸೀದಿ, ಚರ್ಚು ಹೀಗೆ ಎಲ್ಲಾ ಕಡೆ ಧ್ವನಿ ವರ್ಧಕಗಳನ್ನು ಹಾಕುತ್ತಾರೆ, ಇದರಿಂದ ಯಾರಿಗೆ ತೊಂದರೆ ಆಗಿದೆ? ಚುನಾವಣಾ ವರ್ಷ ಎಂದು ಈ ರೀತಿ ಬೇಕಂತಲೇ ಕ್ಯಾತೆ ತೆಗೆಯುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಇವೆಲ್ಲ ಸಮಾಜದ ಶಾಂತಿ, ಸಾಮರಸ್ಯ ಹಾಳುಮಾಡುವ ಪ್ರಯತ್ನಗಳು ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಮಸೀದಿಗಳಲ್ಲಿನ ಧ್ವನಿವರ್ಧಕ ಬಳಕೆಗೆ ವಿರೋಧ ವ್ಯಕ್ತವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಎಲ್ಲಾ ಬೆಳವಣಿಗೆಗಳು ಸರ್ಕಾರದ ಕುಮ್ಮಕ್ಕಿನಿಂದಲೇ ನಡೆಯುತ್ತಿವೆ. ಮುಖ್ಯಮಂತ್ರಿಗಳು ಮೌನವಾಗಿರುವುದಲ್ಲ, ಎಲ್ಲದಕ್ಕೂ ಕುಮ್ಮಕ್ಕು ನೀಡುತ್ತಿದ್ದಾರೆ. ಆರ್.ಎಸ್.ಎಸ್ ಮತ್ತು ಭಜರಂಗದಳ ಸರ್ಕಾರಕ್ಕೆ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡುತ್ತಾ? ಇದನ್ನು ಸರ್ಕಾರ ಹತ್ತಿಕ್ಕಬೇಕು, ಸಮಾಜದ ಶಾಂತಿ ಕದಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮಸೀದಿಗಳಲ್ಲಿನ ಧ್ವನಿವರ್ಧಕ ಬಳಕೆಗೆ ವಿರೋಧ ಹೀಗೆ ಇನ್ನಿತರ ಘಟನೆಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಲ್ಲ. ರಾಜ್ಯಕ್ಕೆ ಯಾವ ಬಂಡವಾಳ ಹೂಡಿಕೆದಾರರು ಬರಲ್ಲ, ಉದ್ಯೋಗ ಸೃಷ್ಟಿಯಾಗಲ್ಲ, ನಿರುದ್ಯೋಗ ಸಮಸ್ಯೆ ಹೋಗಲ್ಲ, ರಾಜ್ಯದ ಜಿಡಿಪಿ ಬೆಳವಣಿಗೆಯಾಗಲ್ಲ. ಸಮಾಜದ ಕೋಮು ಸಾಮರಸ್ಯ ಹಾಳುಮಾಡುವುದನ್ನು ನಿಲ್ಲಿಸಬೇಕು, ಇಲ್ಲದಿದ್ದರೆ ಇದು ನಿಮಗೆ ಮುಂದೆ ತಿರುಗುಬಾಣವಾಗಲಿದೆ ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ