ಬೆಂಗಳೂರು,ಏ.5: ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಮಸೀದಿಗಳಲ್ಲಿನ ಆಜಾನ್(ಮೈಕ್) ನಿಷೇಧ ಕುರಿತಂತೆ ಸರ್ಕಾರ ಯಾವುದೇ ಹೊಸ ಕಾನೂನುಗಳನ್ನು ಮಾಡಿಲ್ಲ. ಈ ವಿಚಾರದಲ್ಲಿ ಯಾವುದೇ ಸಂಘಟನೆಯಾಗಲಿ ಶಾಂತಿ-ಸುವ್ಯವಸ್ಥೆ ಹದಗೆಡಿಸಿದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಸರ್ಕಾರದ ದೃಷ್ಟಿಯಲ್ಲಿ ಎಲ್ಲಾ ಜಾತಿ-ಧರ್ಮದವರು ಸಮಾನರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾವು ಯಾವುದೇ ಹೊಸ ಕಾನೂನುಗಳನ್ನು ಈಗ ಜಾರಿಗೆ ತರುತ್ತಿಲ್ಲ. 2001, 2002 ಹಾಗೂ ಹೈಕೋರ್ಟ್ನ ಆದೇಶಗಳ ಅನುಸಾರ ಜಾರಿಗೆಯಾಗುತ್ತದೆ. ಹಿಂದಿನ ಸರ್ಕಾರಗಳೇ ಈ ನಿಯಮಗಳನ್ನು ಜಾರಿ ಮಾಡಿದ್ದು ಎಂದು ಸಮರ್ಥಿಸಿಕೊಂಡರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಸರ್ಕಾರ ಮೊದಲ ಆದ್ಯತೆ ಕೊಟ್ಟಿದೆ. ಎಲ್ಲಿಯೂ ಕೂಡ ಯಾರೊಬ್ಬರೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡಿಲ್ಲ. ಸಂಘಟನೆಗಳೇ ಇರಲಿ, ಯಾರೇ ಇರಲಿ ಸರ್ಕಾರದ ದೃಷ್ಟಿಯಲ್ಲಿ ಒಂದೇ ಎಂದರು. ಮಸೀದಿಗಳಲ್ಲಿ ಆಜಾನ್ ಕೂಗುವಾಗ ಮೈಕ್ಗಳಿಗೆ ಎಷ್ಟು ಡಿಸಿಬಲ್ ಅಳವಡಿಸಬೇಕೆಂದು ಹೈಕೋರ್ಟ್ ಆದೇಶ ನೀಡಿದೆ. ಈಗಾಗಲೇ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಧಾರ್ಮಿಕ ಮುಖಂಡರು ಸಂಘಟನೆಗಳ ಜೊತೆ ಪೊಲೀಸರು ಮಾತುಕತೆ ನಡೆಸಿದ್ದಾರೆ. ಎಲ್ಲವೂ ಸುಸೂತ್ರವಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಧರ್ಮವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಸಮಾಜವಾಗಲಿ, ಯಾವುದೇ ಸಂಘಟನೆಯಾಗಲಿ ಕಾನೂನು ಕೈಗೆತ್ತಿಕೊಳ್ಳದೆ ಕಾನೂನು ಸುವ್ಯವಸ್ಥೆಗೆ ಕ್ರಮ ಕೈಗೊಳ್ಳುತ್ತೇವೆ. ದೇವಸ್ಥಾನ,ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಹೈಕೋರ್ಟ್ ಆದೇಶವಿದೆ, ಎಷ್ಟು ಡೆಸಿಮಲ್ ವರೆಗೆ ಬಳಸಬೇಕು ಹಿಂದಿನ ಆದೇಶವಿದ್ದು, ಅದನ್ನು ಹಂತಹಂತವಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೆ ತರುವ ಕೆಲಸ ನಡೆಯುತ್ತಿದೆ ಎಂದರು. ನಮ್ಮ ಸರ್ಕಾರ ಹೊಸದಾಗಿ ಯಾವ ಆದೇಶವನ್ನು ಮಾಡುತ್ತಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಇವುಗಳು ಜಾರಿಗೆ ಬಂದಿದ್ದಲ್ಲ. ಹಿಂದಿನ ಆದೇಶಗಳನ್ನೇ ನಾವು ಪಾಲನೆ ಮಾಡುತ್ತಿದ್ದೇವೆ ಅಷ್ಟೇ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)