ಮಂಗಳೂರು : ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆಯಲು ಮಂಗಳೂರು ನಗರದಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಕಮಿಷನರ್ ಎನ್ .ಶಶಿಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ 357 ದೇವಸ್ಥಾನ, ಮಸೀದಿ 168, ಚರ್ಚ್ 95,106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳ ಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿರುವುದನ್ನು ಈಗಾಗಲೇ ಗುರುತಿಸಲಾಗಿದ್ದು, ನಿನ್ನೆಯಿಂದ ನೋಟೀಸು ನೀಡುವ ಕ್ರಮ ಆರಂಭಿಸಲಾಗಿದೆ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದ್ದು, ಬೆಳಗ್ಗೆ ಮತ್ತು ಸಂಜೆ ಹೊತ್ತು ಧ್ವನಿವರ್ಧಕದ ಶಬ್ಧ ಇಂತಿಷ್ಟು ಡೆಸಿಬಲ್ ಗಿಂತ ಮೀರಬಾರದು ಎಂಬ ನಿಯಮವಿದ್ದು ಅದನ್ನು ಪಾಲಿಸುವಂತೆ ಸೂಚಿಸಿ ನೋಟೀಸು ನೀಡಲಾಗುತ್ತಿದೆ.
ಉಲಂಘಿಸಿದರೆ ಮುಂದಿನ ಕಾನೂನು ಕ್ರಮ ವಹಿಸುವ ಸೂಚನೆ ನೀಡಲಾಗಿದೆ. ಸರಕಾರ ಹಾಗೂ ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಮಿಷನರ್ ತಿಳಿಸಿದರು.
ಸರಕಾರದ ಆದೇಶ ಹಾಗೂ ಹೈಕೋರ್ಟ್ ನಿರ್ದೇಶನದ ಪ್ರಕಾರ ಮಂಗಳೂರು ನಗರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಆಝಾನ್ ಗೆ ಸಂಬಂಧಿಸಿ ಕೇವಲ ಮಸೀದಿಗಳನ್ನು ಗುರಿಯಾಗಿಸಿ ಪೊಲೀಸರು ನೋಟೀಸು ನೀಡುತ್ತಿದ್ದಾರೆ ಎಂಬುದು ತಪ್ಪುಗ್ರಹಿಕೆ. ಈ ರೀತಿ ಅಪಪ್ರಚಾರ ನಡೆಯುತ್ತಿರುವುದಕ್ಕೆ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಕಮಿಷನರ್ ಹೇಳಿದರು.

















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ