ಮಂಗಳೂರು : ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆಯಲು ಮಂಗಳೂರು ನಗರದಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಕಮಿಷನರ್ ಎನ್ .ಶಶಿಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ 357 ದೇವಸ್ಥಾನ, ಮಸೀದಿ 168, ಚರ್ಚ್ 95,106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳ ಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿರುವುದನ್ನು ಈಗಾಗಲೇ ಗುರುತಿಸಲಾಗಿದ್ದು, ನಿನ್ನೆಯಿಂದ ನೋಟೀಸು ನೀಡುವ ಕ್ರಮ ಆರಂಭಿಸಲಾಗಿದೆ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದ್ದು, ಬೆಳಗ್ಗೆ ಮತ್ತು ಸಂಜೆ ಹೊತ್ತು ಧ್ವನಿವರ್ಧಕದ ಶಬ್ಧ ಇಂತಿಷ್ಟು ಡೆಸಿಬಲ್ ಗಿಂತ ಮೀರಬಾರದು ಎಂಬ ನಿಯಮವಿದ್ದು ಅದನ್ನು ಪಾಲಿಸುವಂತೆ ಸೂಚಿಸಿ ನೋಟೀಸು ನೀಡಲಾಗುತ್ತಿದೆ.
ಉಲಂಘಿಸಿದರೆ ಮುಂದಿನ ಕಾನೂನು ಕ್ರಮ ವಹಿಸುವ ಸೂಚನೆ ನೀಡಲಾಗಿದೆ. ಸರಕಾರ ಹಾಗೂ ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಮಿಷನರ್ ತಿಳಿಸಿದರು.
ಸರಕಾರದ ಆದೇಶ ಹಾಗೂ ಹೈಕೋರ್ಟ್ ನಿರ್ದೇಶನದ ಪ್ರಕಾರ ಮಂಗಳೂರು ನಗರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಆಝಾನ್ ಗೆ ಸಂಬಂಧಿಸಿ ಕೇವಲ ಮಸೀದಿಗಳನ್ನು ಗುರಿಯಾಗಿಸಿ ಪೊಲೀಸರು ನೋಟೀಸು ನೀಡುತ್ತಿದ್ದಾರೆ ಎಂಬುದು ತಪ್ಪುಗ್ರಹಿಕೆ. ಈ ರೀತಿ ಅಪಪ್ರಚಾರ ನಡೆಯುತ್ತಿರುವುದಕ್ಕೆ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಕಮಿಷನರ್ ಹೇಳಿದರು.

















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)