ಮಂಗಳೂರು : ನಿಯಮ ಮೀರಿ ಧ್ವನಿವರ್ಧಕ ಬಳಕೆಗೆ ತಡೆಯಲು ಮಂಗಳೂರು ನಗರದಲ್ಲಿ 1001 ಸ್ಥಳಗಳಿಗೆ ನೋಟೀಸು ನೀಡಲಾಗಿದೆ ಎಂದು ಕಮಿಷನರ್ ಎನ್ .ಶಶಿಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ 357 ದೇವಸ್ಥಾನ, ಮಸೀದಿ 168, ಚರ್ಚ್ 95,106 ಶಿಕ್ಷಣ ಸಂಸ್ಥೆಗಳು, 60 ಕೈಗಾರಿಕಾ ಸ್ಥಳ ಗಳು, 98 ಮನರಂಜನಾ ಸ್ಥಳ ಸೇರಿದಂತೆ 1001 ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯಾಗುತ್ತಿರುವುದನ್ನು ಈಗಾಗಲೇ ಗುರುತಿಸಲಾಗಿದ್ದು, ನಿನ್ನೆಯಿಂದ ನೋಟೀಸು ನೀಡುವ ಕ್ರಮ ಆರಂಭಿಸಲಾಗಿದೆ. ವಿವಿಧ ಸ್ಥಳ ಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಯಮವಿದ್ದು, ಬೆಳಗ್ಗೆ ಮತ್ತು ಸಂಜೆ ಹೊತ್ತು ಧ್ವನಿವರ್ಧಕದ ಶಬ್ಧ ಇಂತಿಷ್ಟು ಡೆಸಿಬಲ್ ಗಿಂತ ಮೀರಬಾರದು ಎಂಬ ನಿಯಮವಿದ್ದು ಅದನ್ನು ಪಾಲಿಸುವಂತೆ ಸೂಚಿಸಿ ನೋಟೀಸು ನೀಡಲಾಗುತ್ತಿದೆ.
ಉಲಂಘಿಸಿದರೆ ಮುಂದಿನ ಕಾನೂನು ಕ್ರಮ ವಹಿಸುವ ಸೂಚನೆ ನೀಡಲಾಗಿದೆ. ಸರಕಾರ ಹಾಗೂ ಕೋರ್ಟ್ ಆದೇಶದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಮಿಷನರ್ ತಿಳಿಸಿದರು.
ಸರಕಾರದ ಆದೇಶ ಹಾಗೂ ಹೈಕೋರ್ಟ್ ನಿರ್ದೇಶನದ ಪ್ರಕಾರ ಮಂಗಳೂರು ನಗರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮಾಧ್ಯಮಕ್ಕೆ ಮಾಹಿತಿ ನೀಡಿದರು. ಆಝಾನ್ ಗೆ ಸಂಬಂಧಿಸಿ ಕೇವಲ ಮಸೀದಿಗಳನ್ನು ಗುರಿಯಾಗಿಸಿ ಪೊಲೀಸರು ನೋಟೀಸು ನೀಡುತ್ತಿದ್ದಾರೆ ಎಂಬುದು ತಪ್ಪುಗ್ರಹಿಕೆ. ಈ ರೀತಿ ಅಪಪ್ರಚಾರ ನಡೆಯುತ್ತಿರುವುದಕ್ಕೆ ಈ ಸ್ಪಷ್ಟನೆ ನೀಡುತ್ತಿರುವುದಾಗಿ ಕಮಿಷನರ್ ಹೇಳಿದರು.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ