ಮಂಗಳೂರು, ಎ.6: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿಸಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
“ಬಿಜೆಪಿ ನನಗೆ ಎರಡು ಬಾರಿ ಅಧ್ಯಕ್ಷ ಸ್ಥಾನ ನೀಡಿದೆ. ಇದೀಗ ಕಾರಣವಿಲ್ಲದೆ ಪದಚ್ಯುತಿ ಮಾಡಿರುವುದು ನೋವು ತಂದಿದೆ. ನಾನು ಪಕ್ಷ ಮತ್ತು ಸರಕಾರಕ್ಕೆ ವಿಧೇಯನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಸರಕಾರ ಕಾರಣ ಹೇಳಿದ್ದರೆ, ಆತ್ಮವಿಮರ್ಶೆ ಮಾಡಿಕೊಳ್ಳಬಹುದಿತ್ತು. ಕಾರಣ ಗೊತ್ತಿಲ್ಲ ಎಂದು ಎಲ್ಲ ನಾಯಕರು ಹೇಳುತ್ತಿದ್ದಾರೆ. ಸರಕಾರ ಯಾವುದೇ ಕ್ರಮಕ್ಕೆ ಸ್ವತಂತ್ರ” ಎಂದು ರಹೀಂ ಉಚ್ಚಿಲ್ ಪ್ರತಿಕ್ರಿಯಿಸಿದ್ದಾರೆ.
ರಹೀಂ ಉಚ್ಚಿಲ್ ಬಿಜೆಪಿಯಲ್ಲಿದ್ದು, ಪ್ರತಿ ಬಾರಿಯೂ ಪಕ್ಷದ, ಸರಕಾರದ ನಿಲುವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಧಾರ್ಮಿಕ ವಿಷಯ ಬಂದಾಗ ಧರ್ಮದ ವಿಷಯವನ್ನೂ ಸಮರ್ಥನೆ ಮಾಡುತ್ತಿದ್ದರು. ಈ ಹಿಂದೆ ಹಿಜಾಬ್ ವಿಚಾರವಾಗಿಯೂ ಬಿಜೆಪಿ ಪರವೇ ಮಾತನಾಡಿದ್ದರು.
ಅಲ್ಲದೇ ಹಲಾಲ್ ವಿಷಯ ಚರ್ಚೆಗೆ ಬಂದಾಗ, ಹಿಂದುಗಳಿಗೆ ಹಲಾಲ್ ಆಹಾರ ಕೊಡಬಾರದು, ಇದು ಧರ್ಮ ವಿರುದ್ಧ ಎಂದಿದ್ದರು. ಈ ಎಲ್ಲ ಹೇಳಿಕೆಗಳ ಜೊತೆಗೆ ಹಲಾಲ್ 1400 ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂಬ ಇಸ್ಲಾಮಿನ ನಿಲುವನ್ನೂ ಸಮರ್ಥನೆ ಮಾಡಿದ್ದರು. ಆದರೆ ಇದೀಗ ಯಾವ ಕಾರಣಕ್ಕೆ ಅವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಲಾಗಿದೆ ಎಂದು ತಿಳಿದುಬಂದಿಲ್ಲ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ