ಮಂಗಳೂರು, ಎ.6: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಹೀಂ ಉಚ್ಚಿಲ್ ಅವರ ಪದಚ್ಯುತಿಗೆ ಕಾರಣ ತಿಳಿಸಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.
“ಬಿಜೆಪಿ ನನಗೆ ಎರಡು ಬಾರಿ ಅಧ್ಯಕ್ಷ ಸ್ಥಾನ ನೀಡಿದೆ. ಇದೀಗ ಕಾರಣವಿಲ್ಲದೆ ಪದಚ್ಯುತಿ ಮಾಡಿರುವುದು ನೋವು ತಂದಿದೆ. ನಾನು ಪಕ್ಷ ಮತ್ತು ಸರಕಾರಕ್ಕೆ ವಿಧೇಯನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಸರಕಾರ ಕಾರಣ ಹೇಳಿದ್ದರೆ, ಆತ್ಮವಿಮರ್ಶೆ ಮಾಡಿಕೊಳ್ಳಬಹುದಿತ್ತು. ಕಾರಣ ಗೊತ್ತಿಲ್ಲ ಎಂದು ಎಲ್ಲ ನಾಯಕರು ಹೇಳುತ್ತಿದ್ದಾರೆ. ಸರಕಾರ ಯಾವುದೇ ಕ್ರಮಕ್ಕೆ ಸ್ವತಂತ್ರ” ಎಂದು ರಹೀಂ ಉಚ್ಚಿಲ್ ಪ್ರತಿಕ್ರಿಯಿಸಿದ್ದಾರೆ.
ರಹೀಂ ಉಚ್ಚಿಲ್ ಬಿಜೆಪಿಯಲ್ಲಿದ್ದು, ಪ್ರತಿ ಬಾರಿಯೂ ಪಕ್ಷದ, ಸರಕಾರದ ನಿಲುವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದರು. ಧಾರ್ಮಿಕ ವಿಷಯ ಬಂದಾಗ ಧರ್ಮದ ವಿಷಯವನ್ನೂ ಸಮರ್ಥನೆ ಮಾಡುತ್ತಿದ್ದರು. ಈ ಹಿಂದೆ ಹಿಜಾಬ್ ವಿಚಾರವಾಗಿಯೂ ಬಿಜೆಪಿ ಪರವೇ ಮಾತನಾಡಿದ್ದರು.
ಅಲ್ಲದೇ ಹಲಾಲ್ ವಿಷಯ ಚರ್ಚೆಗೆ ಬಂದಾಗ, ಹಿಂದುಗಳಿಗೆ ಹಲಾಲ್ ಆಹಾರ ಕೊಡಬಾರದು, ಇದು ಧರ್ಮ ವಿರುದ್ಧ ಎಂದಿದ್ದರು. ಈ ಎಲ್ಲ ಹೇಳಿಕೆಗಳ ಜೊತೆಗೆ ಹಲಾಲ್ 1400 ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂಬ ಇಸ್ಲಾಮಿನ ನಿಲುವನ್ನೂ ಸಮರ್ಥನೆ ಮಾಡಿದ್ದರು. ಆದರೆ ಇದೀಗ ಯಾವ ಕಾರಣಕ್ಕೆ ಅವರನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸಲಾಗಿದೆ ಎಂದು ತಿಳಿದುಬಂದಿಲ್ಲ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ