ಬೆಂಗಳೂರು: ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಶ್ರೀ ಅಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಹಿಂದುತ್ವ ಉಗ್ರವಾದಿಗಳು ಮುಸ್ಲಿಮರ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ಕಲ್ಲಂಗಡಿಯನ್ನು ರಸ್ತೆಗೆಸೆದು ಹಾಳು ಮಾಡಿರುವುದನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡಿ ಪೋಸ್ಟ್ ಮಾಡಿರುವ ಅವರು, ರಾಮಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಉಗ್ರರಿಗಿಂತ ಕೀಳಾಗಿ ವರ್ತಿಸಿದ್ದಾರೆ. ಇವರ ವಿರುದ್ಧ ಉಗ್ರ ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ ಮತ್ತು ಪರಮ ಕಿರಾತಕ ಕೃತ್ಯ. ಕಾಶ್ಮೀರದಲ್ಲಿ ರಕ್ತದೋಕುಳಿ ಹರಿಸುವ ಭಯಾತ್ಪಾದಕರಿಗೂ, ಶಾಂತಿ-ಸೌಹಾರ್ದತೆಗೆ ಕಿಚ್ಚಿಡುತ್ತಿರುವ ಈ ಕಿರಾತಕರಿಗೂ ವ್ಯತ್ಯಾಸವೇ ಇಲ್ಲ. ತಿನ್ನುವ ಅನ್ನಕ್ಕೆ ಮಣ್ಣುಹಾಕಿ ಬದುಕಿಗೆ ಬೆಂಕಿ ಇಡುವ ಇಂಥ ಪ್ರವೃತ್ತಿ ಅನಾಗರಿಕ-ಅಸಹ್ಯ. ಕರ್ನಾಟಕವನ್ನು ಈ ದುಷ್ಟರು, ಶಿಲಾಯುಗದತ್ತ ಹಿಮ್ಮೆಟ್ಟಿಸುತ್ತಿದ್ದಾರೆ ಎನ್ನುವುದರಲ್ಲಿ ಅನುಮಾನವೇ ಇಲ್ಲ.
ಈ ರಕ್ಕಸರು ಕಲ್ಲಂಗಡಿಯನ್ನು ರಸ್ತೆಗೆಸೆದು ನಾಶ ಮಾಡಿದ ಪರಿಯನ್ನು ಗಮಿನಿಸಿದರೆ ಸಾಕು, ಇವರ ರಾಕ್ಷಸ ಪ್ರವೃತ್ತಿ ಉಗ್ರರಿಗಿಂತ ಕಮ್ಮಿಯೇನಲ್ಲ. ಅನ್ನವನ್ನೇ ಹಾಳುಗೆಡವಿದ ಈ ನೀಚರಿಗೆ ತಕ್ಕ ಪಾಠ ಕಲಿಸಲೇಬೇಕು. ಇವರ ವಿರುದ್ಧ ಸರಕಾರವು ಕೂಡಲೇ ಭಯೋತ್ಪಾದನೆ ವಿರುದ್ಧದ ಕಾಯ್ದೆ ಅಡಿ ಕೇಸು ದಾಖಲಿಸಬೇಕು. ಸರ್ವ ಜನಾಂಗದ ತೋಟಕ್ಕೆ ಸಮಾಧಿ ಕಟ್ಟುವ ಕೆಲಸವನ್ನು ಬಿಜೆಪಿ ಸರಕಾರ ಮಾಡುತ್ತಿದೆಯಾ? ಎಂಬ ಸಂಶಯ ನನ್ನದು. ‘ಮೌನಂ ಸಮ್ಮತಿ ಲಕ್ಷಣಂ’ ಎನ್ನುವಂತೆ ಸಿಎಂ ಬಸವರಾಜ ಬೊಮ್ಮಾಯಿ, ಬಾಯಿಗೆ ಬೀಗ ಹಾಕಿಕೊಂಡು, ‘ಸತ್ತ ಸರಕಾರಕ್ಕೆ ನಾನೇ ಸಾಹುಕಾರ’ ಎನ್ನುವಂತೆ ಬೆಂಕಿ ನಡುವೆ ಪಿಟೀಲು ಬಾರಿಸುತ್ತಿದ್ದ ನೀರೋ ದೊರೆಯನ್ನು ಮೀರಿಸುತ್ತಿದ್ದಾರೆ.
ಅನ್ನಕ್ಕೆ ಮಣ್ಣು ಹಾಕುವುದು ಯಾವ ಧರ್ಮ? ಬದುಕಿಗೆ ಬೆಂಕಿ ಇಡುವುದು ಯಾವ ಧರ್ಮ? ಮನುಷ್ಯತ್ವಕ್ಕೆ ಸಮಾಧಿ ಕಟ್ಟುವುದು ಯಾವ ಧರ್ಮ? ಮಾನವೀಯತೆಯ ಸಾಕಾರಮೂರ್ತಿ ಶ್ರೀರಾಮಚಂದ್ರನಿಂದ ಇವರು ಕಲಿತದ್ದು ಯಾವ ಧರ್ಮ? ಸೇವೆಯನ್ನೇ ಧರ್ಮವೆಂದು ನಂಬಿದ ಶ್ರೀ ಆಂಜನೇಯನಿಂದ ಇವರು ಕಲಿತ ಆದರ್ಶ ಧರ್ಮ ಇದೇನಾ? ಎಂದು ಪ್ರಶ್ನೆಮಾಡಿರುವ ಅವರು, ‘ನನ್ನ ಪ್ರಕಾರ ಇವರು ಹಿಂದೂಗಳೇ ಅಲ್ಲ, ಮನಷ್ಯರೂ ಅಲ್ಲ. ಧರ್ಮಾಂದತೆಯ ಮತ್ತಿನಲ್ಲಿ ತೇಲುತ್ತಿರುವ ಕ್ರೂರ ಮೃಗಗಳು. ಅಂಗಡಿಗಳನ್ನು ನಾಶಪಡಿಸಿ, ಕಲ್ಲಂಗಡಿಯನ್ನು ಹಾಳುಗೆಡವಿದ ಎಲ್ಲ ಕಿರಾತಕರ ವಿರುದ್ಧ ಸರಕಾರ ಕೂಡಲೇ ಕ್ರಿಮಿನಲ್ ಕೇಸು ದಾಖಲಿಸಬೇಕು, ರಾಜ್ಯದಿಂದಲೇ ಗಡೀಪಾರು ಮಾಡಬೇಕು. ಇದು ನನ್ನ ಆಗ್ರಹ” ಎಂದಿದ್ದಾರೆ.
ದುಷ್ಕರ್ಮಿಗಳು ನಡೆಸಿದ ಈ ಪೈಶಾಚಿಕ ಕೃತ್ಯದ ಬಗ್ಗೆ ಕಲ್ಲಂಗಡಿ ಕಳೆದುಕೊಂಡ ನಬಿಸಾಬಿ ಹಾಗೂ ದೇಗುಲದ ಮುಖ್ಯಸ್ಥರು ನೀಡಿರುವ ಈ ಹೇಳಿಕೆಗಳನ್ನು ಸರಕಾರ ಗಂಭಿರವಾಗಿ ಪರಿಗಣಿಸಬೇಕು ಎಂಬುದಾಗಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ.
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ & ಪರಮ ಕಿರಾತಕ ಕೃತ್ಯ. 1/6 pic.twitter.com/kCRMBzRlXb
— H D Kumaraswamy (@hd_kumaraswamy) April 9, 2022
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ