ಧಾರವಾಡ,ಏ.11: ನುಗ್ಗಿಕೇರಿ ಆಂಜನೇಯ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿದ ಅಂಜುಮನ್ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ಅಲ್ಲಿನ ಪರ್ಯಾಯಸ್ಥರೊಂದಿಗೆ ಚರ್ಚಿಸಿದರು.
‘ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾದ ಧಾರವಾಡದಲ್ಲಿ ಇಂಥ ಘಟನೆಗಳು ನಡೆಯಬಾರದಿತ್ತು. ಈ ದೇವಾಲಯ ತನ್ನ ಕೀರ್ತಿಗೆ ಜಗತ್ಪ್ರಸಿದ್ಧವಾಗಬೇಕೇ ಹೊರತು, ಇಂಥ ಅಪಕೀರ್ತಿಗಲ್ಲ. ಹೀಗಾಗಿ ಇಲ್ಲಿ ಸೌಹಾರ್ದತೆ ನೆಲೆಸುವಂತೆ ಸಮಾಜದ ಪ್ರತಿಯೊಬ್ಬರೂ ಸೇರಿ ಕೆಲಸ ಮಾಡಬೇಕಿದೆ’ ಎಂದು ಇಸ್ಮಾಯಿಲ್ ತಮಟಗಾರ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪರ್ಯಾಯಸ್ಥ ನರಸಿಂಹ ದೇಸಾಯಿ, ‘ಇಲ್ಲಿ ಎಲ್ಲಾ ಸಮುದಾಯವರಿಗೂ ಅವಕಾಶ ಮಾಡಿಕೊಡಲಾಗಿದೆ. ನಮ್ಮ ಉದ್ದೇಶವೂ ಪ್ರತಿಯೊಬ್ಬರೂ ಸೋದರರಂತೆ ಬಾಳುವುದೇ ಆಗಿದೆ. ಈ ಕುರಿತು 12 ಜನ ಪರ್ಯಾಯಸ್ಥರು ಸಭೆ ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.
ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ‘ಖಾಸಗಿ ಟ್ರಸ್ಟ್ ಆಗಿರುವ ನುಗ್ಗಿಕೇರಿ ದೇವಾಲಯದಲ್ಲಿ ನಡೆದಿರುವುದು ಒಂದು ಆಕಸ್ಮಿಕ ಘಟನೆ. ಈಗಾಗಲೇ ಪೊಲೀಸರು ನಾಲ್ವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇಂಥ ಘಟನೆ ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಲಾಗಿದೆ’ ಎಂದರು.
















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್