ಮಂಗಳೂರು: ಉನ್ನತ ವಿದ್ವಾಂಸರೂ, ಹಲವಾರು ಮೊಹಲ್ಲಾಗಳಲ್ಲಿ ಮುದರ್ರಿಸರಾಗಿ ಸೇವೆ ಗೈದಿರುವ ಬಹು ಪಿ.ಎಸ್ ಇಬ್ರಾಹೀಂ ಮದನಿ ತುರ್ಕಳಿಕೆ(60) ವಫಾತಾದರು.
ಅಜಿಲಮುಗೇರು, ಉರುವಾಲು ಪದವು, ಚಿಕ್ಕಮಗಳೂರು ಆಲ್ ದೂರು, ಕೊಂಡಂಗೇರಿ ಮುಂತಾದ ಮೊಹಲ್ಲಾಗಳಲ್ಲಿ ಮುದರ್ರಿಸರಾಗಿ ಸೇವೆ ಗೈದಿದ್ದಾರೆ. ಪ್ರಮುಖ ವಿದ್ವಾಂಸರಾದ ಮರ್ಹೂಂ ಪಿ.ಎ.ಉಸ್ತಾದ್ ಕುಂಬೋಲ್ ಮತ್ತು ಮರ್ಹೂಮ್ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದ್ ಗುರುವರ್ಯರಾಗಿದ್ದರು.
ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಸದಸ್ಯರೂ, ಮದನೀಸ್ ಕರ್ನಾಟಕ ರಾಜ್ಯ ಸಮಿತಿಯ ಕ್ಷೇಮನಿಧಿ ವಿಭಾಗದ ಅಧ್ಯಕ್ಷರು, ಬೆಳ್ತಂಗಡಿ ತಾಲೂಕು ಮದನೀಸ್ ಕೋಶಾಧಿಕಾರಿಯೂ ಆಗಿ ಸಂಘಟನಾ ರಂಗದಲ್ಲಿ ಕಾರ್ಯಾಚರಿಸುತ್ತಿದ್ದರು.
ಅವರು ಪತ್ನಿ, ಆರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನೂ ಶಿಷ್ಯ ವೃಂದವನ್ನೂ ಅಗಲಿದ್ದಾರೆ. ಮಹಾನರ ವಫಾತಿಗೆ ಮದನೀಸ್ ಕೇಂದ್ರ ಸಮಿತಿ ತೀವ್ರ ಸಂತಾಪ ಸೂಚಿಸಿದ್ದು, ಅವರ ಹೆಸರಲ್ಲಿ ಖುರ್ ಆನ್ ಪಾರಾಯಣ, ತಹ್ಲೀಲ್, ಹಾಗೂ ಪ್ರತ್ಯೇಕ ದುಆ ನಡೆಸುವಂತೆ ಮದನೀಸ್ ಅಸೋಸಿಯೇಷನ್ ಕೇಂದ್ರ ಸಮಿತಿ ಅಧ್ಯಕ್ಷರಾದ ಸಯ್ಯಿದ್ ಅಬೂಬಕರ್ ಸಿದ್ದೀಕ್ ತಂಙ್ಙಳ್ ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಎ.ಅಬ್ದುಲ್ ರಹ್ಮಾನ್ ಮದನಿ ಜೆಪ್ಪು ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ