ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಸೇರಿ ಸಚಿವರ ಆಪ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಉಡುಪಿ ಪೊಲೀಸ್ ಠಾಣೆಯಲ್ಲಿ ಈಶ್ವರಪ್ಪ ವಿರುದ್ಧ FIR ದಾಖಲಾಗಿದ್ದು, ಐಪಿಸಿ ಸೆಕ್ಷನ್ 306, ಸೆಕ್ಷನ್ 34 ಅಡಿ ಎಫ್ಐಆರ್ ದಾಖಲಾಗಿದೆ. ಸಚಿವ ಈಶ್ವರಪ್ಪ A1, ಬಸವರಾಜ್ A2, ರಮೇಶ್ A3 ಆರೋಪಿಗಳಾಗಿದ್ದಾರೆ.
ಸಂತೋಷ್ ಸೋದರ ಸಂಬಂಧಿ ಪ್ರಶಾಂತ ಪಾಟೀಲ್ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲು ಮಾಡಲಾಗಿದೆ. ಸಚಿವ ಈಶ್ವರಪ್ಪ ವಿರುದ್ಧ ಶೇ.40 ಲಂಚಕ್ಕಾಗಿ ಬೇಡಿಕೆ ಇಟ್ಟ ಆರೋಪವನ್ನು ಸಚಿವ ಈಶ್ವರಪ್ಪ ಮತ್ತು ಆಪ್ತರ ವಿರುದ್ಧ ಸಂತೋಷ್ ಮಾಡಿದ್ದರು. ಹಿಂಡಲಗ ಗ್ರಾಮದ ಶ್ರೀಲಕ್ಷ್ಮೀದೇವಿ ಜಾತ್ರೆಯ ಹಿನ್ನೆಲೆಯಲ್ಲಿ ಮಾಡಿದ್ದ ರಸ್ತೆ ಕಾಮಗಾರಿಯ 4 ಕೋಟಿ ರೂಪಾಯಿ ಬಿಡುಗಡೆಗೆ ಸಂತೋಷ್ ಮನವಿ ಮಾಡಿ ಬಿಲ್ ಮಂಜೂರು ಮಾಡದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅನುಮಾನಾಸ್ಪದ ಸಾವು ಇದಾಗಿದ್ದು, ಮೂವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ