ಉಡುಪಿ: ನಮ್ಮ ಸಹೋದರ, ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಅಲ್ಲಿಯ ತನಕ ಲಾಡ್ಜ್ನಿಂದ ಮೃತದೇಹವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಮೃತರ ಸಹೋದರ ಸಂಬಂಧಿ ಪ್ರಶಾಂತ್ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆಯಿಂದ ಪಂಚನಾಮೆ ನಡೆಯುತ್ತಿದ್ದು, ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.ಪೊಲೀಸ್ ತನಿಖೆಗೆ ಕುಟುಂಬಸ್ಥರು ಸಂಪೂರ್ಣ ಸಹಕಾರ ಕೊಟ್ಟಿದ್ದೇವೆ. ಈಗ ಪೊಲೀಸ್ ಇಲಾಖೆ ಕೂಡ ನಮಗೆ ಸಹಕಾರ ಕೊಡಬೇಕು. ಎಫ್ಐಆರ್ನಲ್ಲಿ ಹೆಸರು ಇರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ತಾಕೀತು ಮಾಡಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಗೆ ಎಲ್ಲ ರೀತಿಯ ಸಹಕಾರವನ್ನು ಕೊಟ್ಟಿದ್ದೇವೆ. ಮುಂದೆಯೂ ಕೊಡುತ್ತೇವೆ. ಈಗಾಗಲೇ ಲಾಡ್ಜ್ನಲ್ಲಿ ಸಿಕ್ಕಿರುವ ವಸ್ತುಗಳು, ನಮ್ಮ ಸಹೋದರ ಸಂತೋಷ್ ಪಾಟೀಲ್ ಅವರು ಕಳುಹಿಸಿರುವ ವಾಟ್ಸಾಪ್ ಸಂದೇಶಗಳು ಹಾಗೂ ಇತರೆ ಸಾಕ್ಷ್ಯಗಳ ಬಗ್ಗೆ ನಾವೂ ಕೂಡ ಮೊಬೈಲ್ನಲ್ಲಿ ಚಿತ್ರ ಇಟ್ಟುಕೊಂಡಿದ್ದೇವೆ. ಈಗಿರುವ ಪ್ರಾಥಮಿಕ ಮಾಹಿತಿಯಂತೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ನಾವು ಯಾರ ಮೇಲೆ ದೂರು ಕೊಟ್ಟಿದ್ದೇವೆಯೋ ಅವರನ್ನು ಕೂಡಲೇ ಪೊಲೀಸರು ಬಂಧಿಸಬೇಕು. ಪೊಲೀಸರು ಹೇಳಿದಂತೆ ನಾವು ಎಲ್ಲ ರೀತಿಯ ಸಹಕಾರ ಕೊಟ್ಟಿದ್ದೇವೆ. ಈಗ ನಾವು ಪೊಲೀಸರನ್ನು ಕೇಳುತ್ತಿರುವುದು ಇಷ್ಟೇ. ಯಾರು ಯಾರು ಆರೋಪಿಗಳಿದ್ದಾರೋ ಅವರನ್ನು ಬಂಧಿಸದ ಹೊರತು ಲಾಡ್ಜ್ನಿಂದ ಮೃತ ದೇಹ ತೆಗೆಯಲು ಬಿಡುವುದಿಲ್ಲ ಎಂದು ಸಹೋದರ ತಿಳಿಸಿದರು.
ಸಂತೋಷ್ ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಿದ್ದರು. ಕಾಮಗಾರಿ ಪೂರ್ಣಗೊಂಡರೂ ವರ್ಕ್ ಆರ್ಡರ್, ಹಾಗೂ ಬಿಲ್ ಪಾವತಿ ಆಗಿರಲಿಲ್ಲ. ವರ್ಕ್ ಆರ್ಡರ್ ಹಾಗೂ ಬಿಲ್ ಪಾಸ್ ಮಾಡಲು 40% ಕಮಿಷನ್ ಬೇಡಿಕೆಯನ್ನು ಸಚಿವ ಕೆ.ಎಸ್ ಈಶ್ವರಪ್ಪ, ಅವರ ಪಿಎಗಳು ಇಟ್ಟಿದ್ದಾರೆ ಎಂದು ಆರೋಪ ಮಾಡಿದ್ದರು.
ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಪತ್ರವನ್ನು ಬರೆದಿದ್ದರು. ಆದರೆ ಈ ಆರೋಪವನ್ನು ಸಚಿವ ಈಶ್ವರಪ್ಪ ನಿರಾಕರಿಸಿದ್ದರು. ಅಷ್ಟೇ ಅಲ್ಲದೆ ಸಂತೋಷ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)