ನವದೆಹಲಿ: ಹಿಜಾಬ್ ತೀರ್ಪು ಸಂಬಂಧ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆ ರದ್ದುಪಡಿಸಲು ಅಥವಾ ತಮ್ಮ ರಾಜ್ಯಕ್ಕೆ ಪ್ರಕರಣ ವರ್ಗಾಯಿಸುವಂತೆ ಚೆನ್ನೈ ನಿವಾಸಿ, ತಮಿಳುನಾಡು ತೌಹೀದ್ ಜಮಾತ್ ಸಂಘಟನೆಯ ಸದಸ್ಯ ಸಲ್ಲಿಸಿರುವ ಮನವಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ನೋಟಿಸ್ ನೀಡಿದೆ.
ಆರೋಪಿ ಕೋವೈ ರಹಮತ್ ಉಲ್ಲಾ ಎಂಬುವವರು, ‘ಇದೇ ವಿಷಯಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಈಗಾಗಲೇ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಎರಡು ವಿಭಿನ್ನ ತನಿಖಾ ಸಂಸ್ಥೆಗಳು, ಎರಡೂ ಎಫ್ಐಆರ್ಗಳಲ್ಲಿ ಪರ್ಯಾಯ ತನಿಖೆ ನಡೆಸುವುದು ಸರಿಯಲ್ಲ. ಇದು ಕಾನೂನು ದುರುಪಯೋಗಕ್ಕೆ ಸಮಾನ’ ಎಂದು ವಾದಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
‘ಎರಡು ಎಫ್ಐಆರ್ಗಳಿಗೆ ಸಂಬಂಧಿಸಿ ಎರಡು ರಾಜ್ಯಗಳ ವಿವಿಧ ನ್ಯಾಯಾಲಯಗಳು ಮತ್ತು ಪೊಲೀಸ್ ಠಾಣೆಗಳನ್ನು ಸಂಪರ್ಕಿಸುವುದು ಅಸಾಧ್ಯ. ಅರ್ಜಿದಾರರು ತೀವ್ರ ಸಂಕಷ್ಟ ಅನುಭವಿಸಬೇಕಾಗುತ್ತದೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠವು, ಈ ಅರ್ಜಿ ಸಂಬಂಧ ಎರಡೂ ರಾಜ್ಯಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ ತಮಿಳುನಾಡು ತೌಹೀದ್ ಜಮಾತ್ (ಟಿಎನ್ಟಿಜೆ)ನ ರಹಮತ್ ಉಲ್ಲಾ ಮತ್ತು ಜಮಾಲ್ ಮೊಹಮ್ಮದ್ ಉಸ್ಮಾನಿ ವಿರುದ್ಧ ತಮಿಳುನಾಡು ಪೊಲೀಸರು ಮೊದಲು ಪ್ರಕರಣ ದಾಖಲಿಸಿಕೊಂಡು, ಬಂಧಿಸಿದ್ದರು. ನಂತರ ಇವರನ್ನು ಬೆಂಗಳೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು, ತನಿಖೆ ನಡೆಸುತ್ತಿದ್ದಾರೆ.
ಅರ್ಜಿದಾರರ ಮೇಲೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಇದೆ. ಇದೇ ವರ್ಷದ ಮಾರ್ಚ್ 18ರಂದು ತಮಿಳುನಾಡಿನ ಮಧುರೈನಲ್ಲಿ ಇವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮಾರ್ಚ್ 19ರಂದು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಅಪರಾಧಗಳಿಗಾಗಿ ಎರಡನೇ ಎಫ್ಐಆರ್ ದಾಖಲಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ