ದುಬೈ | ದುಬೈ ಅಂತರಾಷ್ಟ್ರೀಯ ಹೋಲಿ ಖುರ್ಆನ್ ಅವಾರ್ಡ್ 25 ನೇ ಆವೃತ್ತಿಯು ಮುಕ್ತಾಯಗೊಂಡಿದೆ. ಸ್ಪರ್ಧೆಯಲ್ಲಿ ಅಲ್ಜೀರಿಯಾದ ಬೂಬಕ್ಕರ್ ಅಬ್ದುಲ್ ಹಾದಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಕಾರಂದೂರು ಜಾಮಿಆ ಮರ್ಕಝ್ ವಿದ್ಯಾರ್ಥಿ, ಕೋಝಿಕ್ಕೋಡ್ನ ಈಙಾಪುಝದ ಹಾಫಿಳ್ ಝೈನುಲ್ ಆಬಿದ್ 10 ಉನ್ನತ ಶ್ರೇಣಿಯಲ್ಲಿ ಆರನೇ ಸ್ಥಾನವನ್ನು ಪಡೆದರು.
ದುಬೈ ಇಂಟರ್ನ್ಯಾಶನಲ್ ಹೋಲಿ ಖುರ್ಆನ್ ಪ್ರಶಸ್ತಿಯು ಅತಿ ದೊಡ್ಡ ಬಹುಮಾನ ವಿಜೇತ ಸ್ಪರ್ಧೆಯಾಗಿದೆ. ದುಬೈನ ಅಲ್ ಮಂಝರ್ ಹಾಲ್ ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರನ್ನು ಘೋಷಿಸಲಾಯಿತು. ಸೆನೆಗಲ್ ಮತ್ತು ಈಜಿಪ್ಟ್ನ ಪ್ರತಿನಿಧಿಗಳು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನವನ್ನು ಪಡೆದರು.ಶೈಖ್ ಮನ್ಸೂರ್ ಬಿನ್ ಮುಹಮ್ಮದ್ ಬಿನ್ ರಾಶಿದ್ ಆಲ್ ಮಕ್ತೂಮ್ ಪ್ರಶಸ್ತಿ ಪ್ರದಾನ ಮಾಡಿದರು.
ಝೈನುಲ್ ಅಬಿದ್ ಈಗಾಗಲೇ ಹಲವಾರು ರಾಷ್ಟ್ರೀಯ ಮತ್ತು ರಾಜ್ಯ ಹೋಲಿ ಖುರ್ಆನ್ ಸ್ಪರ್ಧೆಗಳನ್ನು ಗೆದ್ದಿದ್ದಾರೆ. ತಾಂಜಾನಿಯಾದಲ್ಲಿ 2021 ರ ಇಂಟರ್ನ್ಯಾಷನಲ್ ಹೋಲಿ ಖುರ್ಆನ್ ಅವಾರ್ಡ್ ಸ್ಪರ್ಧೆಯಲ್ಲೂ ಪಾಲ್ಗೊಂಡಿದ್ದರು. ಮರ್ಕಝ್ ಜೂನಿಯರ್ ಶರಿಯಾ ವಿದ್ಯಾರ್ಥಿಯಾಗಿರುವ ಝೈನುಲ್ ಅಬಿದ್ ಕ್ಯಾಲಿಕಟ್ ವಿಶ್ವವಿದ್ಯಾನಿಲಯದಲ್ಲಿ ಬಿಎ ಇಂಗ್ಲಿಷ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದಾರೆ.
ಇವರು ಈಙಾಪುಝ ವಲಿಯೇರಿಯಿಲ್ ಅಬ್ದುರ್ರಹ್ಮಾನ್ ಮತ್ತು ಸಕೀನಾ ದಂಪತಿಯ ಪುತ್ರ. ಝೈನುಲ್ ಆಬಿದ್ ಅವರನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅಭಿನಂದಿಸಿದ್ದಾರೆ.

ಅಂತರಾಷ್ಟ್ರೀಯ ಹೋಲಿ ಖುರ್ಆನ್ ಪ್ರಶಸ್ತಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಮಲೆಯಾಳಿ ವಿದ್ಯಾರ್ಥಿ ಹಾಫಿಝ್ ಝೈನುಲ್ ಅಬಿದೀನ್ ಅವರನ್ನು ಇಸಿಎಚ್ ವತಿಯಿಂದ ಸನ್ಮಾನಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?