ಮಂಗಳೂರು: ಎಸ್ಇಝೆಡ್ (ವಿಶೇಷ ಆರ್ಥಿಕ ವಲಯ) ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೀನಿನ ಫ್ಯಾಕ್ಟರಿಯ ಟ್ಯಾಂಕೊಂದರಲ್ಲಿ ವಿಷಾನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದು, 5 ಮಂದಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮೃತಪಟ್ಟ ಕಾರ್ಮಿಕರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು ಎನ್ನಲಾಗಿದ್ದು, ಸಮಿರುಲ್ ಇಸ್ಲಾಂ, ಉಮರ್ ಫಾರೂಕ್, ನಿಜಾಮುದ್ದೀನ್ ಸಾಜ್ ಎಂದು ಗುರುತಿಸಲಾಗಿದೆ. ಮಿರಾಜುಲ್ ಇಸ್ಲಾಂ, ಸರಾಫತ್ ಆಲಿ, ಅಜನ್ ಆಲಿ, ಕರೀಬುಲ್ಲ, ಅಫ್ತಲ್ ಮಲ್ಲಿಕ್ ಸೇರಿದಂತೆ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಎಸ್ಇಝೆಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೀನಿನ ಫ್ಯಾಕ್ಟರಿಯಲ್ಲಿ ಭಾನುವಾರ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದಾನೆ. ಈ ವೇಳೆ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಮಂದಿ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿದೆ.
ಅಸ್ವಸ್ಥಗೊಂಡವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರಲ್ಲಿ ಮೂವರು ಮೃತಪಟ್ಟು 5 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.
ಪೊಲೀಸರ ದೌಡು:
ರಾಸಾಯನಿಕ ಸೋರಿಕೆಯಾದ ಮಾಹಿತಿ ಸಿಗುತ್ತಿದ್ದಂತೆ ನಗರ ಪೊಲೀಸರು ಆಸ್ಪತ್ರೆ, ಫ್ಯಾಕ್ಟರಿಗೆ ದೌಡಾಯಿಸಿದ್ದಾರೆ. ನಗರ ಕಾನೂನು ಸುವ್ಯವಸ್ಥಾ ವಿಭಾಗದ ಉಪ ಪೊಲೀಸ್ ಆಯುಕ್ತ ಹರಿರಾಂ ಶಂಕರ್ ಆಸ್ಪತ್ರೆಗೆ ಭೇಟಿ ಅನಾರೋಗ್ಯಕ್ಕೀಡಾದವರ ಯೋಗಕ್ಷೇಮ ವಿಚಾರಿಸಿದ್ದಾರೆ. ಡಿಸಿಪಿ ಹರಿರಾಂ ಶಂಕರ್, ಬಜಪೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ತ್ಯಾಜ್ಯದಿಂದ ವಿಷಾನಿಲ:
ಮೀನಿನ ತ್ಯಾಜ್ಯಕ್ಕೆ ಬಳಕೆ ಮಾಡುವ ವಿಷಾನಿಲ ಸೋರಿಕೆಯಾಗಿ ಈ ಘಟನೆ ನಡೆದಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಆದರೆ ಘಟನೆಯ ಸರಿಯಾದ ಕಾರಣ ತನಿಖೆಯಿಂದ ತಿಳಿದು ಬರಬೇಕಿದೆ. ಅವಘಡ ನಡೆದ ಹಿನ್ನಲೆಯಲ್ಲಿ ಫ್ಯಾಕ್ಟರಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ