ಬಾಗಲಕೋಟೆ: ರಾಜ್ಯದಲ್ಲಿ ಕಮಿಷನ್ ದಂಧೆ ಬಗ್ಗೆ ಜೋರಾಗಿ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿಯೇ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೊಸ ಬಾಂಬ್ ಹಾಕಿದ್ದಾರೆ. ಮಠಗಳಿಗೆ ಅನುದಾನ ಬಿಡುಗಡೆ ಆಗಬೇಕು ಅಂದರೂ ನಾವು 30 ಪರ್ಸೆಂಟ್ ಕಮಿಷನ್ ಕೊಡಲೇಬೇಕು ಎಂದಿದ್ದಾರೆ. ಸ್ವಾಮೀಜಿಗಳ ಈ ಆರೋಪ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಎಲ್ಲಿಗೆ ಬಂತು ಭ್ರಷ್ಟಾಚಾರ..?
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಮಾತನಾಡಿದ ಸ್ವಾಮೀಜಿ.. ಸರ್ಕಾರ ಮಠಗಳಿಗೆ ಕೊಡುವ ಅನುದಾನದಲ್ಲಿ ಶೇ. 30 ಕಮಿಷನ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತದೆ. ಇಲ್ಲದಿದ್ರೆ ಯಾವುದೇ ಕಾಮಗಾರಿಗಳೂ ಆಗುವುದಿಲ್ಲ ಹೀಗಾಗಿ ಇನ್ನಾದರೂ ನಾವು ಜಾಗೃತರಾಗಬೇಕು ಎಂದಿದ್ದಾರೆ.
ಬುದ್ಧಿಗೇಡಿ ಸರಕಾರ: ಈಗಂತೂ ಬುದ್ಧಿಗೇಡಿ ಸರಕಾರಗಳು ಬರುತ್ತಿವೆ. ಉತ್ತರ ಭಾರತದಲ್ಲಿ ಒಂದು ವರ್ಷ ಕಾಲ ಸಾವು–ನೋವಿಗೂ ಅಂಜದೇ ರೈತರು ನಡೆಸಿದ ಹೋರಾಟದ ಮಾದರಿಯ ಪ್ರತಿಭಟನೆಗೆ ರಾಜ್ಯದ ರೈತರು ಸಿದ್ಧರಾದರೆ ಮಾತ್ರ ಅನ್ನ ಸಿಕ್ಕೀತು. ಇಲ್ಲದಿದ್ದರೆ ಏನೂ ಸಿಗಲಾರದು. ಬಹಳ ಜಾಣರಾಗಬೇಕು’ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ರೈತರಿಗೆ ಕಿವಿಮಾತು ಹೇಳಿದರು.
ನೀವೆಲ್ಲರೂ ಒಂದು ವಿಚಾರವನ್ನ ತಿಳಿದುಕೊಳ್ಳಬೇಕು. ನೀವು ಜಾಣರಾಗಬೇಕು. ಯಾಕಂದ್ರೆ ಯೋಜನೆಗಳು ಹೆಚ್ಚು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಅವು ಏನೇನ್ ಆಗುತ್ತಿವೆ ಅನ್ನೋದು ಎಲ್ಲರಿಗೂ ಗೊತ್ತಿದೆ. ನಮಗೂ ಬಹಳ ಛೋಲೋ ಗೊತ್ತಿದೆ. ಒಬ್ಬ ಸ್ವಾಮೀಜಿಗೆ ಅನುದಾನ ಬಿಡುಗಡೆ ಮಾಡಿದ್ರೆ, 30 ಪರ್ಸೆಂಟ್ ಕಟ್ ಆದ್ಮೇಲೆಯೇ ಕಟ್ಟಡ ಕೆಲಸ ಶುರು ಆಗ್ತವೆ. ಇಲ್ಲದಿದ್ರೆ ಅದು ಆಗುವುದಿಲ್ಲ. ಆ ಅಧಿಕಾರಿಗಳು ಬಂದು ನಮಗೆ ಹೇಳ್ತಾರೆ. ಇಷ್ಟು ರೊಕ್ಕವನ್ನ ಕಟ್ ಮಾಡಿಲ್ಲ ಅಂದ್ರೆ ನಿಮ್ಮ ಕೆಲಸ ಆಗೋದಿಲ್ಲ ಎಂದು ಹೇಳುತ್ತಾರೆ. ಎಲ್ಲಿಗೆ ಬಂತು ಅಂತಾ ಭ್ರಷ್ಟಾಚಾರ.
ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್