janadhvani

Kannada Online News Paper

ಎಲ್ಲಾ ಪ್ರಕರಣಗಳಲ್ಲೂ ತಕ್ಷಣ ಕ್ರಮ ಕೈಗೊಂಡಿದ್ದೇವೆ- ಸಿಎಂ ಬೊಮ್ಮಾಯಿ

ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ.

ಚಿಕ್ಕಮಗಳೂರು: ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಎಂದರೆ ಏನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ಪ್ರಶ್ನಿಸಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಹುಬ್ಬಳ್ಳಿ ಘಟನೆಗೂ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೂ ವಿಳಂಬ ಮಾಡಿಲ್ಲ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ಪ್ರಶ್ನಿಸಿದರು.

ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದರು.

error: Content is protected !! Not allowed copy content from janadhvani.com