ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ತನ್ನ ಕಬಂಧ ಬಾಹು ಚಾಚುವ ಮುನ್ಸೂಚನೆ ನೀಡ್ತಿದೆ. ದೆಹಲಿ, ಕೇರಳ ಸೇರಿದಂತೆ ಹಲವೆಡೆ ನಿಧಾನವಾಗಿ ಕೊರೊನಾ ಕೇಸ್ಗಳು ಏರಿಕೆಯಾಗೋಕೆ ಶುರುವಾಗಿದೆ. ಕೊರೊನಾ ಕಾಟ ಶುರುವಾಗ್ತಿದ್ದಂತೆ ಹಲವೆಡೆ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಈಗಷ್ಟೇ ಭಾರತ ಕೊರೊನಾ 3ನೇ ಅಲೆಯಿಂದ ಹೊರ ಬಂದಿದೆ. ಮೊನ್ನೆಮೊನ್ನೆಯಷ್ಟೇ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಸೋಂಕಿಗೆ ಕಡಿವಾಣ ಹಾಕೋಕೆ ವಿಧಿಸಿದ್ದ ಕಠಿಣ ರೂಲ್ಸ್ಗಳನ್ನ ಈಗಷ್ಟೇ ಸಡಿಲಗೊಳಿಸಲಾಗಿದೆ. ಇನ್ನೇನು ಎಲ್ಲಾ ಸರಿ ಹೋಯ್ತು ಅಂತಾ ನಿಟ್ಟುಸಿರು ಬಿಡುವಷ್ಟರಲ್ಲಿ, ದೇಶಾದ್ಯಂತ ಮತ್ತೆ ಕೊರೊನಾ ಆರ್ಭಟಿಸುವ ಮುನ್ಸೂಚನೆ ಕೊಟ್ಟಿದೆ.
ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 2,183 ಕೊರೊನಾ ಕೇಸ್ಗಳು ಪತ್ತೆಯಾಗಿದ್ರೆ, ಇದೇ ಅವಧಿಯಲ್ಲಿ 214 ಮಂದಿ ಸೋಂಕಿತರು ಕೊರೊನಾ ಉಪಟಳಕ್ಕೆ ಜೀವ ಬಿಟ್ಟಿದ್ದಾರೆ. ಇತ್ತ ದೇಶದಲ್ಲಿ ಪತ್ತೆಯಾದ ಕೊರೊನಾ ಕೇಸ್ಗಳ ಪೈಕಿ ಅತೀ ಹೆಚ್ಚು ಕೇಸ್ಗಳು ಕೇರಳದಲ್ಲೇ ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ ಕೇರಳವೊಂದರಲ್ಲೇ 940 ಕೇಸ್ ಪತ್ತೆಯಾಗಿದೆ. ಇನ್ನು ಇದೇ ಅವಧಿಯಲ್ಲಿ ಕೇರಳವೊಂದರಲ್ಲೇ 213 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇತ್ತ ದೇಶಾದ್ಯಂತ ದಿಢೀರ್ ಕೊರೊನಾ ಕೇಸ್ಗಳು ಏರಿಕೆಯಾಗ್ತಿದ್ದಂತೆ ಹಲವೆಡೆ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಹಲವು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಉತ್ತರಪ್ರದೇಶದ 6 ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಗೌತಮ ಬುದ್ದ ನಗರ, ಗಾಝಿಯಾಬಾದ್, ಹಪುರ್, ಮೀರುತ್ ಭಾಘಪತ್ ಹಾಗೂ ಲಕ್ನೌನಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಅಲ್ಲದೆ ಲಸಿಕೆ ಪಡೆಯದವರನ್ನು ಹುಡುಕಿ ಕೂಡಲೇ ಎರಡೂ ಡೋಸ್ ಲಸಿಕೆ ಪೂರ್ಣಗೊಳಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಇತ್ತ ಹರಿಯಾಣದ ನಾಲ್ಕು ಜಿಲ್ಲೆಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಇನ್ನು ದೆಹಲಿಯಲ್ಲಿ ಮಾಸ್ಕ್ ಕಡ್ಡಾಯದ ಬಗ್ಗೆ ಸಭೆ ನಡೆಸಿ ಕಡ್ಡಾಯಗೊಳಿಸುವ ಸಾಧ್ಯತೆಗಳಿವೆ.
ಸೋಂಕು ಕಣ್ಮರೆಯಾಯ್ತು ಅಂತಾ, ಎಲ್ಲವನ್ನೂ ಮರೆತು, ಕುಣಿದು ಕುಪ್ಪಳಿಸುತ್ತಿರುವ ಜನೆತೆಗೆ ಮತ್ತೆ ಕೊರೊನಾ ಶಾಕ್ ಕೊಟ್ಟಿದೆ. ದೇಶಾದ್ಯಂತ ನಿಧಾನವಾದರೂ ಮುಂದಿನ ದಿನಗಳಲ್ಲಿ ಮತ್ತೆ ಆರ್ಭಟಿಸುವ ಸೂಚನೆ ನೀಡಿದೆ. ಆದ್ರೆ ಜನರು ಈಗಿನಿಂದಲೇ ಎಚ್ಚರಿಕೆ ವಹಿಸಿದ್ರೆ ಮುಂಬರುವ ಕಠಿಣ ದಿನಗಳಿಂದ ಬಚಾವ್ ಆಗಬಹುದು. ಕೊರೋನಾ ಕಾಲದಲ್ಲಿ ಅಲ್ಪ ಸಂಖ್ಯಾತ ಮುಸಲ್ಮಾನರು ನೀಡಿದ ಸಹಾಯ, ಸಹಕಾರವನ್ನು ಮರೆತು, ಪವಿತ್ರ ತಿಂಗಳಾದ ರಮಳಾನಿನಲ್ಲೇ ಅವರ ವಿರುದ್ಧ ಉಗ್ರ ಹಿಂದುತ್ವ ಸಂಘಟನೆಗಳು ಸರ್ಕಾರದ ಬೆಂಬಲದೊಂದಿಗೆ ನಡೆಸುತ್ತಿರುವ ಕ್ರೂರತೆಗೆ ಇಡೀ ಪ್ರಪಂಚವೇ ನಿಬ್ಬೆರಗಾಗಿದೆ. ಇಂದು ದೇಶದಲ್ಲಿ ಉದ್ಭವಿಸಿರುವ ಮತಾಂಧತೆ ಎಂಬ ಮಾರಕ ಸೋಂಕು ಕೊರೋನಾಕ್ಕಿಂತಲೂ ಅಪಾಯಕಾರಿಯಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)