ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ತನ್ನ ಕಬಂಧ ಬಾಹು ಚಾಚುವ ಮುನ್ಸೂಚನೆ ನೀಡ್ತಿದೆ. ದೆಹಲಿ, ಕೇರಳ ಸೇರಿದಂತೆ ಹಲವೆಡೆ ನಿಧಾನವಾಗಿ ಕೊರೊನಾ ಕೇಸ್ಗಳು ಏರಿಕೆಯಾಗೋಕೆ ಶುರುವಾಗಿದೆ. ಕೊರೊನಾ ಕಾಟ ಶುರುವಾಗ್ತಿದ್ದಂತೆ ಹಲವೆಡೆ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಈಗಷ್ಟೇ ಭಾರತ ಕೊರೊನಾ 3ನೇ ಅಲೆಯಿಂದ ಹೊರ ಬಂದಿದೆ. ಮೊನ್ನೆಮೊನ್ನೆಯಷ್ಟೇ ಜನಜೀವನ ಸಹಜ ಸ್ಥಿತಿಗೆ ಮರಳಿದೆ. ಸೋಂಕಿಗೆ ಕಡಿವಾಣ ಹಾಕೋಕೆ ವಿಧಿಸಿದ್ದ ಕಠಿಣ ರೂಲ್ಸ್ಗಳನ್ನ ಈಗಷ್ಟೇ ಸಡಿಲಗೊಳಿಸಲಾಗಿದೆ. ಇನ್ನೇನು ಎಲ್ಲಾ ಸರಿ ಹೋಯ್ತು ಅಂತಾ ನಿಟ್ಟುಸಿರು ಬಿಡುವಷ್ಟರಲ್ಲಿ, ದೇಶಾದ್ಯಂತ ಮತ್ತೆ ಕೊರೊನಾ ಆರ್ಭಟಿಸುವ ಮುನ್ಸೂಚನೆ ಕೊಟ್ಟಿದೆ.
ದೇಶಾದ್ಯಂತ ಕಳೆದ 24 ಗಂಟೆಯಲ್ಲಿ 2,183 ಕೊರೊನಾ ಕೇಸ್ಗಳು ಪತ್ತೆಯಾಗಿದ್ರೆ, ಇದೇ ಅವಧಿಯಲ್ಲಿ 214 ಮಂದಿ ಸೋಂಕಿತರು ಕೊರೊನಾ ಉಪಟಳಕ್ಕೆ ಜೀವ ಬಿಟ್ಟಿದ್ದಾರೆ. ಇತ್ತ ದೇಶದಲ್ಲಿ ಪತ್ತೆಯಾದ ಕೊರೊನಾ ಕೇಸ್ಗಳ ಪೈಕಿ ಅತೀ ಹೆಚ್ಚು ಕೇಸ್ಗಳು ಕೇರಳದಲ್ಲೇ ವರದಿಯಾಗಿದೆ. ಕಳೆದ 24 ಗಂಟೆಯಲ್ಲಿ ಕೇರಳವೊಂದರಲ್ಲೇ 940 ಕೇಸ್ ಪತ್ತೆಯಾಗಿದೆ. ಇನ್ನು ಇದೇ ಅವಧಿಯಲ್ಲಿ ಕೇರಳವೊಂದರಲ್ಲೇ 213 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇತ್ತ ದೇಶಾದ್ಯಂತ ದಿಢೀರ್ ಕೊರೊನಾ ಕೇಸ್ಗಳು ಏರಿಕೆಯಾಗ್ತಿದ್ದಂತೆ ಹಲವೆಡೆ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಹಲವು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಉತ್ತರಪ್ರದೇಶದ 6 ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಗೌತಮ ಬುದ್ದ ನಗರ, ಗಾಝಿಯಾಬಾದ್, ಹಪುರ್, ಮೀರುತ್ ಭಾಘಪತ್ ಹಾಗೂ ಲಕ್ನೌನಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಅಲ್ಲದೆ ಲಸಿಕೆ ಪಡೆಯದವರನ್ನು ಹುಡುಕಿ ಕೂಡಲೇ ಎರಡೂ ಡೋಸ್ ಲಸಿಕೆ ಪೂರ್ಣಗೊಳಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಇತ್ತ ಹರಿಯಾಣದ ನಾಲ್ಕು ಜಿಲ್ಲೆಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಲಾಗಿದೆ. ಇನ್ನು ದೆಹಲಿಯಲ್ಲಿ ಮಾಸ್ಕ್ ಕಡ್ಡಾಯದ ಬಗ್ಗೆ ಸಭೆ ನಡೆಸಿ ಕಡ್ಡಾಯಗೊಳಿಸುವ ಸಾಧ್ಯತೆಗಳಿವೆ.
ಸೋಂಕು ಕಣ್ಮರೆಯಾಯ್ತು ಅಂತಾ, ಎಲ್ಲವನ್ನೂ ಮರೆತು, ಕುಣಿದು ಕುಪ್ಪಳಿಸುತ್ತಿರುವ ಜನೆತೆಗೆ ಮತ್ತೆ ಕೊರೊನಾ ಶಾಕ್ ಕೊಟ್ಟಿದೆ. ದೇಶಾದ್ಯಂತ ನಿಧಾನವಾದರೂ ಮುಂದಿನ ದಿನಗಳಲ್ಲಿ ಮತ್ತೆ ಆರ್ಭಟಿಸುವ ಸೂಚನೆ ನೀಡಿದೆ. ಆದ್ರೆ ಜನರು ಈಗಿನಿಂದಲೇ ಎಚ್ಚರಿಕೆ ವಹಿಸಿದ್ರೆ ಮುಂಬರುವ ಕಠಿಣ ದಿನಗಳಿಂದ ಬಚಾವ್ ಆಗಬಹುದು. ಕೊರೋನಾ ಕಾಲದಲ್ಲಿ ಅಲ್ಪ ಸಂಖ್ಯಾತ ಮುಸಲ್ಮಾನರು ನೀಡಿದ ಸಹಾಯ, ಸಹಕಾರವನ್ನು ಮರೆತು, ಪವಿತ್ರ ತಿಂಗಳಾದ ರಮಳಾನಿನಲ್ಲೇ ಅವರ ವಿರುದ್ಧ ಉಗ್ರ ಹಿಂದುತ್ವ ಸಂಘಟನೆಗಳು ಸರ್ಕಾರದ ಬೆಂಬಲದೊಂದಿಗೆ ನಡೆಸುತ್ತಿರುವ ಕ್ರೂರತೆಗೆ ಇಡೀ ಪ್ರಪಂಚವೇ ನಿಬ್ಬೆರಗಾಗಿದೆ. ಇಂದು ದೇಶದಲ್ಲಿ ಉದ್ಭವಿಸಿರುವ ಮತಾಂಧತೆ ಎಂಬ ಮಾರಕ ಸೋಂಕು ಕೊರೋನಾಕ್ಕಿಂತಲೂ ಅಪಾಯಕಾರಿಯಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ