ಮಂಗಳೂರು: ಸರಕಾರ ತನ್ನ ಸಂಪೂರ್ಣ ವಿಫಲತೆಯನ್ನು ಮರೆಮಾಚಲು, ರಾಜ್ಯದ ಮೂಲ ನಿವಾಸಿಗಳ ಆಡಳಿತ ವಿರೋಧಿ ನಡೆಯನ್ನು ವಿಫಲ ಗೊಳಿಸಲು, ಮತೀಯ ಉದ್ವಿಗ್ನತೆ ಯನ್ನು ಪರಾಕಾಷ್ಠೆಗೆ ತಂದು, ಆ ಮೂಲಕ ಈ ರಾಜ್ಯದ ದಲಿತ, ಹಿಂದುಳಿದ ವರ್ಗ, ಬುಡಕಟ್ಟು ಜನರನ್ನು ಪ್ರಚೋದಿಸುತ್ತಿದೆ.
ಧಾರ್ಮಿಕ ಹಬ್ಬಗಳ ನೆಪದಲ್ಲಿ, ಮಸೀದಿ ಆಝಾನ್ ವಿರುದ್ಧ ಈ ಮುಗ್ದ ಜನರನ್ನು ಚೂ ಬಿಟ್ಟು, ಆ ಮೂಲಕ ಮಸೀದಿಗಳಲ್ಲಿ ದ್ವಜ ಸ್ಥಾಪನೆ ಗೊಳಿಸಿ, ಮುಸ್ಲಿಮರು ಪ್ರಚೋದನೆ ಹೊಂದುವಂತೆ ಮಾಡಿ, ಕಾನೂನು ಕೈಗತ್ತಿ ಕೊಳ್ಳುವ ಸ್ಪಷ್ಟ ಷಡ್ಯಂತ್ರವನ್ನು ಈ ನೆಲದ ಸವರ್ಣೀಯ ಮೈಕ್ರೋ ಮೈನಾರಿಟಿ ದುಷ್ಕರ್ಮಿಗಳು ಮಾಡುತ್ತಿದ್ದಾರೆ ಎಂದು ಈ ನೆಲದ ಮುಸ್ಲಿಮರು ಮತ್ತು ಮುಸ್ಲಿಮೇತರ ಜನತೆ ಅರಿಯಬೇಕು.
ಬಸವಣ್ಣ, ಸ್ವಾಮಿ ವಿವೇಕಾನಂದ, ಟಿಪ್ಪು ಸುಲ್ತಾನ್, ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ, ನಿತ್ಯಾನಂದ ಸ್ವಾಮಿ, ಉಳ್ಳಾಲ ಶ್ರೀನಿವಾಸ ಮಲ್ಯ, ಮಂಜೇಶ್ವರ ಗೋವಿಂದ ಪೈ, ಕಯ್ಯಾರ ಕಿಞ್ಞಣ್ಣ ರೈ, ಬೀ. ಎ. ಮೊಯಿದಿನ್, ಮುಂತಾದ ಸಾಮಾಜಿಕ ನಾಯಕರು ಈ ಜನಾಂಗದ ಸೌಹಾರ್ದತೆ ಪ್ರತಿ ಪಾದಿಸಿದ ಮೇರು ವ್ಯಕ್ತಿಗಳು ಗತಿಸಿ ಹೋದ ಈ ನಾಡಿನಲ್ಲಿ , ನಾವು ಯಾವುದೇ ರೀತಿಯಲ್ಲಿಯೂ ಪ್ರಚೋದನೆಗೆ ಒಳಾಗಾಗಬಾರದು, ಬದಲಾಗಿ ಸವರ್ಣೀಯರ ಗಲಭೆಯ ಪಿತೂರಿಯನ್ನು ಅರಿಯಬೇಕು, ಮುಸ್ಲಿಮರು ಯಾವುದೇ ಕಾರಣಕ್ಕೂ ಸಂಯಮ ಮೀರಬಾರದು.
ಸವರ್ಣೀಯರ ವಿಧ್ವಂಸಕ ನಡೆಯನ್ನು, ಆದಷ್ಟು ನಾಜೂಕಾಗಿ ಪರಿಹರಿಸುವ ನಡೆ ಹೊಂದಬೇಕು. ಈ ದೇಶದ ಕಾನೂನು ಮತ್ತು ಸಂವಿಧಾನ ಪ್ರಧಾನಿಸಿದ ಪ್ರಜಾ ಸತ್ತಾತ್ಮ ಕ ಹೋರಾಟ ದಿಂದ ಮಾತ್ರ ನ್ಯಾಯ ಪಡೆಯಲು ಸಾಧ್ಯ, ಕಾನೂನನ್ನು ಕೈಗೆತ್ತಿದರೆ ಅದರಿಂದ ವೈರಿ ವರ್ಗಕ್ಕೆ ಲಾಭ, ಇದನ್ನು ಮುಸ್ಲಿಮರು ಅರಿಯಬೇಕು. ಗಲಭೆ ಹುನ್ನಾರದಲ್ಲಿ ಸ್ಪಷ್ಟವಾಗಿ ಸವರ್ಣೀಯ ಹಸ್ತದ ವಾಸನೆ ಎದ್ದು ಕಾಣುವುದನ್ನು ನಾವು ಅರಿಯಬೇಕು ಎಂದು ಕೆ.ಅಶ್ರಫ್ (ಅಧ್ಯಕ್ಷರು.ದ.ಕ. ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)