ಮಂಗಳೂರು,ಏ.22: ಸಾರ್ವಜನಿಕ ಸ್ಥಳಗಳಲ್ಲಿ ಹಿಜಾಬ್ ಹಾಕಲು ಬಿಡುವುದಿಲ್ಲ ಎಂಬ ಹೇಳಿಕೆ ನೀಡಿ ಉಡುಪಿಯಲ್ಲಿ ಯಶ್ ಪಾಲ್ ಸುವರ್ಣ ತನ್ನ ಹರಕು ಮುರುಕು ಪಾಳೇಗಾರಿಕೆ ಮೆರೆಯಲು ಪ್ರಯತ್ನಿಸಿದ್ದಾನೆ.
ಈ ಹಿಂದೆ ಶಾಲೆಗಳ ಸಮವಸ್ತ್ರ ಸಂಬಂಧಿಸಿ ಮುಸ್ಲಿಮ್ ವಿಧ್ಯಾರ್ಥಿನಿಯರ ವಿಷಯದಲ್ಲಿ ನಡೆಸಿದ ಅವಾಂತರದಂತೆ ಅಲ್ಲ, ಸಾರ್ವಜನಿಕ ಸ್ಥಳಗಳಲ್ಲಿ ಧರಿಸುವ ಹಿಜಾಬ್ ವಿಷಯ, ಯಶ್ ಪಾಲ ತಿಳಿಯುವುದು ಒಳಿತು.
ಯಶ್ ಪಾಲ ಬಹುಶಃ ಬಾವಿಯ ಕಪ್ಪೆಯಂತೆ ಉಳಿದಿದ್ದಾನೆ. ಸಮುದ್ರ ವೀಕ್ಷಣೆ ಆಗಿಲ್ಲ. ಯಶ್ಪಾಲ್ ಸಾರ್ವಜನಿಕ ಸ್ಥಳದಲ್ಲಿ ಜನರ ಉಡುಪಿನ ಬಗ್ಗೆ ತನ್ನ ತಾಕತ್ತು ಪ್ರದರ್ಶಿಸಲಿ. ಸಾರ್ವಜನಿಕ ಸ್ಥಳಗಳಲ್ಲಿ ಉಡುಪು ಧರಿಸುವ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಪ್ರದರ್ಶನವಾಗಲಿ ಎಂದು ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಸವಾಲು ಹಾಕಿದ್ದಾರೆ.
ಹಿಜಾಬ್ ಧರಿಸಿದ ಕಾರಣಕ್ಕೆ ಉಡುಪಿಯಲ್ಲಿ ಪಿಯುಸಿ ಪರೀಕ್ಷೆ ಬರೆಯಲು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ತೆರಳಿದ ವಿದ್ಯಾರ್ಥಿನಿಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಮುಖಂಡ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ “ಭವಿಷ್ಯದಲ್ಲಿ ಕಾಲೇಜುಗಳಲ್ಲಿ ಮಾತ್ರವಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿಯೂ ಹಿಜಾಬ್ ಅನ್ನು ನಿಷೇಧಿಸಲಾಗುವುದು” ಎಂದು ಶುಕ್ರವಾರ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ