ಹುಬ್ಬಳ್ಳಿ: ಏಪ್ರಿಲ್ 24: ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಪ್ರಧಾನಮಂತ್ರಿಗಳು 27 ರಂದು ವಿಡಿಯೋ ಕಾನ್ಫರೆನ್ಸ್ ಕರೆದಿದ್ದಾರೆ ಎಂದರು.
ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎನ್ನುವ ಮಾತನ್ನು ಪರಿಣಿತರು ಹೇಳಿದ್ದಾರೆ.
ಈಗಾಗಲೇ ಆರೋಗ್ಯ ಸಚಿವರೂ ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಎಪ್ರಿಲ್ 27 ರಂದು ಪ್ರಧಾನ ಮಂತ್ರಿಗಳ ವೀಡಿಯೋ ಸಂವಾದದ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡುತ್ತೇವೆ ಎಂದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ