ಮುಂಬೈ,ಏ.25: ರಾಜಕಾರಣಿಗಳಾದ ರವಿ ಮತ್ತು ನವನೀತ್ ರಾಣಾ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯ ಸರ್ಕಾರವು ಪೊಲೀಸರನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ರಾಜಕೀಯ ಮುಖಂಡರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಆರೋಪಿಸಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ‘ಅಸಹಿಷ್ಣು’ ಎಂದು ಕರೆದ ಫಡ್ನವಿಸ್, ಹನುಮಾನ್ ಚಾಲೀಸಾವನ್ನು ಪಠಿಸಿದರೆ ರಾಷ್ಟ್ರದ್ರೋಹ ಹೇಗಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಬೇಕೆಂದು ಒತ್ತಾಯಿಸಿದರು. ಸೋಮವಾರ ಮುಂಬೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹನುಮಾನ್ ಚಾಲೀಸಾವನ್ನು ಪಠಿಸುವುದರಿಂದ ದೇಶದ್ರೋಹಕ್ಕೆ ಆಹ್ವಾನ ನೀಡಿದಂತಾಗುತ್ತದೆ ಎಂದಾದರೆ, ನಾವೆಲ್ಲರೂ ಅದನ್ನು ಪಠಿಸುತ್ತೇವೆ ಮತ್ತು ಪ್ರತಿದಿನ ಮಾಡುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಮುಂಬೈ ಪೊಲೀಸರು ತಮ್ಮ ಪತಿ, ಶಾಸಕ ರವಿ ರಾಣಾ ಅವರನ್ನು ಬಂಧಿಸಿದ ನಂತರ ಸಂಸದ ನವನೀತ್ ರಾಣಾ ಅವರನ್ನು ಜೈಲಿನಲ್ಲಿ ಅನುಚಿತವಾಗಿ ನಡೆಸಿಕೊಂಡಿದ್ದಾರೆ. ‘ಜೈಲಿನಲ್ಲಿ ಮಹಿಳಾ ಸಂಸದರ ಮೇಲೆ ದೌರ್ಜನ್ಯ ನಡೆದಿದೆ. ಆಕೆಯ ಜಾತಿಯ ಬಗ್ಗೆ ಕಾಮೆಂಟ್ ಮಾಡಲಾಗಿದೆ. ಆಕೆಗೆ ನೀರು ನೀಡಿಲ್ಲ ಮತ್ತು ವಾಶ್ ರೂಂ ಬಳಸಲು ಅವಕಾಶ ನೀಡಿಲ್ಲ ಎಂದು ಹೇಳಿದ್ದಾರೆ.