ಬೆಂಗಳೂರು: ಇಂಟರ್ನೆಟ್ ಕರೆಯ ಮೂಲಕ ನನಗೆ ಬೆದರಿಕೆ ಹಾಕ್ತಾರೆ. ನನಗೆ ಕೊಟ್ಟಿರುವ ಸೆಕ್ಯೂರಿಟಿ ವ್ಯವಸ್ಥೆಯನ್ನ 3 ವರ್ಷಗಳ ಹಿಂದೆಯೆ ತೆಗೆಯಲಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಿಯಾಂಕ್ ಗಾಂಧಿಗೆ ತನಿಖಾಧಿಕಾರಿಗಳು ನೋಟಿಸ್ ನೀಡಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಬೆಂಗಳೂರಲ್ಲಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ತಮಗೆ ಬೆದರಿಕೆ ಇರುವ ಬಗ್ಗೆ ಪ್ರಿಯಾಂಕ್ ಗಾಂಧಿ ಮಾಹಿತಿ ನೀಡಿದರು.
ಸರ್ಕಾರದ ಅಸಮರ್ಥತೆಗೆ ಈ ನೋಟೀಸ್ ಸಾಕ್ಷಿ
ಈ ಸಂಬಂಧ ಬೊಮ್ಮಾಯಿ ಗೃಹ ಸಚಿವರಾಗಿದ್ದಾಗ ನಾನೇ ಭೇಟಿ ಮಾಡಿದ್ದೆ. ಸೆಕ್ಯೂರಿಟಿ ಬಗ್ಗೆ ಆಗ ಕೇಳಿದ್ದೆ. ಆದರೆ ನನಗೆ ಯಾವ ಸೆಕ್ಯೂರಿಟಿಯನ್ನೂ ಕೊಟ್ಟಿಲ್ಲ. ಕಳೆದ ಬಾರಿ ಬೆದರಿಕೆ ಕರೆಯ ಬಗ್ಗೆ ತನಿಖೆ ನಡೆದಾಗ ಅಮೆರಿಕ ಸರ್ವರ್ ವರೆಗೆ ಹೋಗಿ ಎಂಡ್ ಆಯ್ತು. ಅದರ ನಂತರ ಮೂಲ ಸಿಕ್ಕಿಲ್ಲ ಎಂದರು. ನಾನೂ ಸಹ ಹೋಗಲಿ ಬಿಡ್ರಪ್ಪ ಅಂದೆ, ಈಗ ಕಂಪ್ಲೆಂಟ್ ಕೊಟ್ಟರೂ ಇಷ್ಟೇ ಆಗೋದು ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ಸಿಐಡಿ ನೋಟಿಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಿನ್ನೆ ಸಂಜೆ ನನ್ನ ಮನೆಗೆ ಸಿಐಡಿಯವರು ಒಂದು ನೋಟೀಸ್ ಕೊಟ್ಟು ಹೋಗಿದ್ದಾರೆ. ಆ ನೋಟೀಸ್ನಲ್ಲಿ ಬಹಳಷ್ಟು ವಿಚಾರ ಪ್ರಸ್ತಾಪಿಸಿದ್ದಾರೆ. ಪಿಎಸ್ಐ ಹುದ್ದೆಗಳ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳಿವೆ ಎಂದು ನೀವು ಹೇಳಿದ್ದೀರಿ, ಆ ದಾಖಲೆಗಳ ಸಲ್ಲಿಸಿ ಎಂದಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಈ ನೋಟೀಸ್ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ