ಬೆಂಗಳೂರು,ಏ.27: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿ ಹಾಗೂ ಪ್ರಮುಖ ಸಚಿವರ ಜೊತೆ ಮಹತ್ವದ ಮಾತುಕತೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ.. ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ. ಅನವಶ್ಯಕವಾಗಿ ಯಾವುದೇ ನಿರ್ಬಂಧ ಹೇರಿಕೆ ಬೇಡ. ಅಗತ್ಯವಿರುವೆಡೆ ನಿರ್ಬಂಧ ಹೇರಿಕೆ ಅಗತ್ಯ ಎಂದು ಮೋದಿ ತಿಳಿಸಿದ್ದಾರೆ. ಲಸಿಕೆ ನೀಡಲು ಶಾಲೆಗಳಲ್ಲಿ ಅಭಿಯಾನ ಮಾಡುತ್ತೇವೆ. ಟೆಸ್ಟ್, ಟ್ರೀಟ್, ಟ್ರ್ಯಾಕ್, ಲಸಿಕೆ ಅನುಸರಿಸಲು ಹೇಳಿದ್ದಾರೆ ಎಂದು ತಿಳಿಸಿದರು.
ನಾಲ್ಕು ಸೂತ್ರಗಳನ್ನು ಅನುಸರಿಸಲು ಮೋದಿ ಹೇಳಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಹೇಳಿದ್ದಾರೆ. ವ್ಯಾಕ್ಸಿನೇಷನ್ ವೇಗ ಹೆಚ್ಚಿಸಲು ಸೂಚನೆ ನೀಡಿದ್ದಾರೆ. ಸಾರ್ವಜನಿಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಜೀವನ ನಡೆಸಬೇಕು. ಏರ್ಪೋರ್ಟ್ಗಳಲ್ಲಿ ಟೆಸ್ಟಿಂಗ್ ಹೆಚ್ಚಳ ಮಾಡುತ್ತೇವೆ ಎಂದು ತಿಳಿಸಿದರು.
ರಾಜ್ಯದ ಕೆಲವು ಮಾಧ್ಯಮಗಳು ಮುಸ್ಲಿಮರ ಹಬ್ಬವನ್ನು ಟಾರ್ಗೆಟ್ ಮಾಡಿ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣವನ್ನು ಜಾರಿಗೆ ತರುತ್ತಿದೆ ಎಂದು ಜನರು ಭಾವಿಸುವ ರೂಪದಲ್ಲಿ ಪ್ರಚಾರ ಪಡಿಸಿ, ಮುಸ್ಲಿಮರ ರಂಜಾನ್ ಹಬ್ಬಾಚರಣೆಗೆ ಮಸೀದಿಗಳಲ್ಲಿ ಅವಕಾಶವಿಲ್ಲ ಎಂಬಿತ್ಯಾದಿ ಊಹಾಪೋಹಗಳನ್ನು ಬಿತ್ತರಿಸಿ ವಿಕೃತ ಆನಂದ ಪಡುತ್ತಿದ್ದ ಮತಾಂಧ ಟಿವಿ ಮಾಧ್ಯಮದವರಿಗೆ ಸಿ.ಎಂ. ಹೇಳಿಕೆಯು ನಿರಾಸೆಯನ್ನು ತಂದಿದೆ.


















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ