ಹೊಸದಿಲ್ಲಿ: ಭಾರತದಲ್ಲಿ ಮುಸ್ಲಿಮರ ಮತ್ತು ಇತರ ಅಲ್ಪಸಂಖ್ಯಾತರ ವಿರುದ್ಧ ಹಿಂದುತ್ವದ ಹೆಸರಿನಲ್ಲಿ ಬಿತ್ತುವ ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಜಗತ್ತಿನಾದ್ಯಂತದ ಹಿಂದುಗಳು ತಮ್ಮ ಸಾಮೂಹಿಕ ಮೌನವನ್ನು ಮುರಿದು ದನಿಯೆತ್ತಬೇಕು ಎಂಬ ಅಮೆರಿಕಾದ ಹಿಂದೂಸ್ ಫಾರ್ ಹ್ಯೂಮನ್ ರೈಟ್ಸ್ ಸಂಸ್ಥೆ ನೀಡಿದ ಹೇಳಿಕೆಗೆ ವಿವಿಧ ಹಿಂದು ಸಂಘಟನೆಗಳು ಮತ್ತು ಧಾರ್ಮಿಕ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಹಿಂದುತ್ವದ ಹೆಸರಿನಲ್ಲಿ ಮುಸ್ಲಿಮರನ್ನು ಹಿಂಸಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ. ವೈವಿಧ್ಯಮಯ ಹಿಂದು ಸಂಪ್ರದಾಯಗಳ ಪ್ರತಿನಿಧಿಗಳಾಗಿ ನಮಗೆ, ಭಾರತದಲ್ಲಿನ ಮತ್ತು ವಿದೇಶಗಳಲ್ಲಿರುವ ಹಿಂದು ನಾಯಕರು ಹಿಂದುತ್ವದ ಹೆಸರಿನಲ್ಲಿ ಇತರ ಧರ್ಮಗಳವರನ್ನು ಹೊರಗಿನವರೆಂಬಂತಹ ರೀತಿಯಲ್ಲಿ ನೋಡುತ್ತಿರುವುದು ಹಾಗೂ ಅವರು ಭಾರತದ ಪೌರತ್ವದ ಸಂಪೂರ್ಣ ಪ್ರಯೋಜನಗಳನ್ನು ಅನುಭವಿಸಲು ಅರ್ಹರಲ್ಲ ಎಂಬರ್ಥದ ರೀತಿಯಲ್ಲಿ ನೋಡುತ್ತಿರುವುದು ಆಘಾತ ಮೂಡಿಸಿದೆ, ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
“ಕೇಸರಿ ವಸ್ತ್ರಧಾರಿ ಸಾಧುಗಳು ಹಾಗೂ ಕೆಲ ಸಂತರು ಹರಿದ್ವಾರ ಧರ್ಮ ಸಂಸದ್ನಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿರುವುದು ಭಯಾನಕ ಹಾಗೂ ನಿರ್ಲಕ್ಷ್ಯವಹಿಸುವಂತಹುದ್ದಲ್ಲ” ಎಂದು ಹೇಳಿಕೆ ತಿಳಿಸಿದೆ.
ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳಲ್ಲಿ ಅಲ್ಲಿನ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲಿನ ಹಿಂಸೆಯು ಭಾರತದಲ್ಲಿ ಮುಸ್ಲಿಮರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಕ್ಕೆ ಸಮರ್ಥನೆಯಾಗುವುದಿಲ್ಲ ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಹೇಳಿಕೆಗೆ ಆರ್ಯಸಮಾಜ್ ಮಂದಿರ, ಅಮೃತಪುರಿ, ಹೊಸದಿಲ್ಲಿ, ಗ್ಲೋಬಲ್ ನೈತಿಕ್ ಶಿಕ್ಷಾ ಕೇಂದ್ರ, ದಿಲ್ಲಿ/ಮಥುರಾ. ಹಿಂದು ಟೆಂಪಲ್ ಸೊಸೈಟಿ ಆಫ್ ನ್ಯೂ ಮೆಕ್ಸಿಕೋ, ಜ್ಯೋತಿ ಮಂದಿರ್, ಒರ್ಲಾಂಡೊ, ಮಾತ್ರಿ ಸದನ್ ಆಶ್ರಮ, ಹರಿದ್ವಾರ, ಪ್ರೇಮ್ ಭಕ್ತಿ ಮಂದಿರ್, ನ್ಯೂಯಾರ್ಕ್ ಮತ್ತು ಇನ್ನೂ ಹಲವಾರು ಸಂಘಟನೆಗಳು ಮತ್ತು ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ