ಬೆಂಗಳೂರು,ಏ.30: ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ? ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ಪಿಎಸ್ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಅವರು, ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು. ಭ್ರಷ್ಟರು, ಕೊಲೆಗಡುಕರು, ರೇಪಿಸ್ಟ್ ಗಳನ್ನು ಸಮರ್ಥಿಸುವುದೇ ತನ್ನ ಕರ್ತವ್ಯ ಎಂದು ಗೃಹ ಸಚಿವರು ತಿಳಿದುಕೊಂಡಂತಿದೆ. ಇಂತಹ ವಿಫಲ, ನಿಷ್ಕ್ರಿಯ ‘ಚೌಕಿದಾರ’ನಿಂದ ಪೊಲೀಸ್ ಇಲಾಖೆಯೇ ಸುರಕ್ಷಿತವಾಗಿ ಇರಲಾರದು ಎಂದು ಹೇಳಿದರು.
ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು ಪಿಎಸ್ ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್ಐ ಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ. ಪಿಎಸ್ಐ ನೇಮಕಾತಿಗೆ ಸರ್ಕಾರ ಯಾವ ಆಧಾರದಲ್ಲಿ ಮರುಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಬೇಕು. ಅಕ್ರಮ ನಡೆದಿರುವುದು ಸಿಐಡಿ ತನಿಖೆಯಿಂದ ಸಾಬೀತಾಗಿದೆಯೇ? ಹಾಗಿದ್ದರೆ ಆ ವರದಿ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದರು.
ಮರುಪರೀಕ್ಷೆಯ ನಿರ್ಧಾರ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಲಿಕ್ಕಾಗಿಯೇ? ಇಲ್ಲವೇ ಹಗರಣವನ್ನು ಮುಚ್ಚಿಹಾಕಿ ದೊಡ್ಡ ತಲೆಗಳನ್ನು ಉಳಿಸಲಿಕ್ಕಾಗಿಯೇ? ಪಿಎಸ್ಐ ನೇಮಕಾತಿ ಹಗರಣದ ಸೂತ್ರಧಾರಿ ದಿವ್ಯಾ ಹಾಗರಗಿ ಬಂಧನವಾದ ತಕ್ಷಣ ಮರುಪರೀಕ್ಷೆಯ ನಿರ್ಧಾರದ ಹಿಂದಿನ ರಹಸ್ಯ ಏನು? ಆಕೆ ನೀಡಿರುವ ಹೇಳಿಕೆಯಲ್ಲಿ ಅಂತಹ ಸ್ಫೋಟಕ ಸಂಗತಿಗಳೇನಿದೆ? ಈ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ ಬಿಜೆಪಿ ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರವೇ ಅಡಿಯಿಂದ ಮುಡಿವರೆಗೆ ಭ್ರಷ್ಟಗೊಂಡಿರುವಾಗ ಪಿಎಸ್ ಐ ನೇಮಕಾತಿ ಹಗರಣದ ಸಿಐಡಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಾರದು. ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯ ತನಿಖೆಯೊಂದೇ ಪರಿಹಾರ. ಭ್ರಷ್ಟಾಚಾರ, ಅಪ್ರಾಮಾಣಿಕತೆ ಮತ್ತು ನಿಷ್ಕ್ರಿಯತೆಯನ್ನು ಪ್ರಶ್ನಿಸದೆ ಇದ್ದರೆ ಕೊನೆಗೆ ಈ ಪಿಡುಗಿಗೆ ಬಹುಸಂಖ್ಯೆಯಲ್ಲಿರುವ ಪ್ರಾಮಾಣಿಕರೇ ಕಷ್ಟ ನಷ್ಟ ಅನುಭವಿಸಬೇಕಾಗುತ್ತದೆ ಎನ್ನುವುದಕ್ಕೆ ಪಿಎಸ್ ಐ ನೇಮಕಾತಿ ಅಕ್ರಮ ಸಾಕ್ಷಿ ಎಂದರು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ