ಲಾಹೋರ್,ಮೇ.06: ವಿರೋಧವಿದ್ರೂ ನೃತ್ಯ ಮತ್ತು ಮಾಡೆಲಿಂಗ್ ವೃತ್ತಿಜೀವನವನ್ನು ಮುಂದುವರಿಸಿದ್ದಕ್ಕಾಗಿ 21 ವರ್ಷದ ಯುವತಿಯನ್ನು ಆಕೆಯ ಸಹೋದರ ಗುಂಡಿಕ್ಕಿ ಕೊಂದಿರುವ ಘಟನೆ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ಪ್ರಾಂತೀಯ ರಾಜಧಾನಿ ಲಾಹೋರ್ನಿಂದ 130 ಕಿಮೀ ದೂರದಲ್ಲಿರುವ ರೆನಾಲಾ ಖುರ್ದ್ ಒಕಾರಾ ಮೂಲದ ಸಿದ್ರಾ, ಸ್ಥಳೀಯ ಬಟ್ಟೆ ಬ್ರಾಂಡ್ಗಾಗಿ ಮಾಡೆಲಿಂಗ್ ಮಾಡುತ್ತಿದ್ದಳು ಮತ್ತು ತನ್ನ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಫೈಸಲಾಬಾದ್ ನಗರದ ರಂಗಮಂದಿರಗಳಲ್ಲಿ ನೃತ್ಯ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ರಾಳ ಪೋಷಕರು ಅವಳನ್ನು ಕುಟುಂಬ ಸಂಪ್ರದಾಯದ ವಿರುದ್ಧ ಹೋಗದೇ, ವೃತ್ತಿಯನ್ನು ತೊರೆಯುವಂತೆ ಒತ್ತಾಯಿಸಿದ್ದರು, ಆದರೆ ಯುವತಿಯು ಪೋಷಕರನ್ನು ಧಿಕ್ಕರಿಸಿ ನೃತ್ಯವನ್ನು ಸಿದ್ರಾ ಮುಂದುವರೆಸಿದ್ದಳು.
ಕಳೆದ ವಾರ ಸಿದ್ರಾ ತನ್ನ ಕುಟುಂಬದೊಂದಿಗೆ ಈದ್ ಆಚರಿಸಲು ಫೈಸಲಾಬಾದ್ನಿಂದ ಮನೆಗೆ ಬಂದಿದ್ದಳು. ಗುರುವಾರ ಆಕೆಯ ಪೋಷಕರು ಮತ್ತು ಸಹೋದರ ಇದೇ ವಿಚಾರವಾಗಿ ಆಕೆಯೊಂದಿಗೆ ಜಗಳವಾಡಿದ್ದಾರೆ. ಮಾಡೆಲಿಂಗ್, ನೃತ್ಯಕ್ಕೆ ಅಂಟಿಕೊಳ್ಳದಂತೆ ಎಚ್ಚರಿಸುತ್ತಾ ಗಲಾಟೆ ವೇಳೆ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಸೋದರ ಹಂಝಾ ಸಿದ್ರಾ ಮೇಲೆ ಗುಂಡು ಹಾರಿಸಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಅಪರಾಧವನ್ನು ಒಪ್ಪಿಕೊಂಡ ಹಂಝಾನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಹಂಝ ತಮ್ಮ ಮೊಬೈಲ್ ಫೋನ್ನಲ್ಲಿ ಸಿದ್ರಾ ಅವರ ನೃತ್ಯ ಪ್ರದರ್ಶನವನ್ನು ಸಂಬಂಧಿಯೊಬ್ಬರು ಫಾರ್ವರ್ಡ್ ಮಾಡಿದ್ದನ್ನ ನೋಡಿದ ಮೇಲೆ ತಂಗಿಯ ಮೇಲೆ ಸಿಟ್ಟಾಗಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ಫೈಸಲಾಬಾದ್ನಲ್ಲಿ 19 ವರ್ಷದ ಮಹಿಳಾ ನರ್ತಕಿ ಆಯೇಷಾ ಅವರನ್ನು ಆಕೆಯ ಮಾಜಿ ಪತಿ ಗುಂಡಿಕ್ಕಿ ಕೊಂದಿದ್ದರು.
ಪಾಕಿಸ್ತಾನದಲ್ಲಿ ವಿಶೇಷವಾಗಿ ಉತ್ತರ ಮತ್ತು ಪಶ್ಚಿಮದಲ್ಲಿರುವ ಬುಡಕಟ್ಟು ಪ್ರದೇಶಗಳಿಗೆ ಸಮೀಪವಿರುವ ಪ್ರದೇಶಗಳಲ್ಲಿ ಮರ್ಯಾದೆಗೇಡು ಹತ್ಯೆಯ ಪ್ರಕರಣಗಳು ಭಯ ಹುಟ್ಟಿಸುವ ರೀತಿಯಲ್ಲಿ ವರದಿಯಾಗುತ್ತಲೇ ಇರುತ್ತವೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ