ಆರ್ .ಟಿ. ನಗರ : ರಾಜ್ಯದಲ್ಲಿ ಅಝಾನ್ ಗೆ ವಿರೋಧ ವ್ಯಕ್ತಪಡಿಸಿ ಶ್ರೀ ರಾಮ ಸೇನೆ ಸೇರಿದಂತೆ ಕೆಲವೊಂದು ಹಿಂದುತ್ವ ಸಂಘಟನೆಗಳು ಭಜನೆ ಇತ್ಯಾದಿ ಮೂಲಕ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.
ಸಿಎಂ ಭೇಟಿ ನಂತರ ಅಲ್ಪಸಂಖ್ಯಾತರ ನಿಯೋಗದ ನೇತೃತ್ವ ವಹಿಸಿದ್ದ ಯು. ಟಿ. ಖಾದರ್ ಹೇಳಿಕೆ ನೀಡಿ, ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವೊಂದು ಶಕ್ತಿಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಸಿಎಂ ಜತೆ ಚರ್ಚೆ ಮಾಡಿದ್ದೇವೆ ಎಂದರು.
ಸಿಎಂ ಕೂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಆಜಾನ್ ಬಗ್ಗೆ ಗೃಹ ಸಚಿವರು ಎಲ್ಲಿಯೂ ಹೇಳಿಲ್ಲ. ಆದರೆ ಶಬ್ದ ಮಾಲಿನ್ಯದ ಬಗ್ಗೆ ಕೋರ್ಟ್ ಆದೇಶದಂತೆ ಸರ್ಕಾರದ ನಿಯಮ ರೂಪಿಸಲಿದೆ. ಅದರಂತೆ ಎಲ್ಲರು ಕೂಡ ಪಾಲನೆ ಮಾಡಬೇಕು ಎಂದಿದ್ದಾರೆ ಎಂದು ಖಾದರ್ ಹೇಳಿದ್ದಾರೆ. ನಿಯೋಗದಲ್ಲಿ ಶಾಸಕರಾದ ಎನ್.ಎ.ಹಾರಿಸ್, ನಝೀರ್ ಅಹ್ಮದ್ ಇದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ