ಆರ್ .ಟಿ. ನಗರ : ರಾಜ್ಯದಲ್ಲಿ ಅಝಾನ್ ಗೆ ವಿರೋಧ ವ್ಯಕ್ತಪಡಿಸಿ ಶ್ರೀ ರಾಮ ಸೇನೆ ಸೇರಿದಂತೆ ಕೆಲವೊಂದು ಹಿಂದುತ್ವ ಸಂಘಟನೆಗಳು ಭಜನೆ ಇತ್ಯಾದಿ ಮೂಲಕ ಅಶಾಂತಿ ಉಂಟು ಮಾಡಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.
ಸಿಎಂ ಭೇಟಿ ನಂತರ ಅಲ್ಪಸಂಖ್ಯಾತರ ನಿಯೋಗದ ನೇತೃತ್ವ ವಹಿಸಿದ್ದ ಯು. ಟಿ. ಖಾದರ್ ಹೇಳಿಕೆ ನೀಡಿ, ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವೊಂದು ಶಕ್ತಿಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಸಿಎಂ ಜತೆ ಚರ್ಚೆ ಮಾಡಿದ್ದೇವೆ ಎಂದರು.
ಸಿಎಂ ಕೂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಆಜಾನ್ ಬಗ್ಗೆ ಗೃಹ ಸಚಿವರು ಎಲ್ಲಿಯೂ ಹೇಳಿಲ್ಲ. ಆದರೆ ಶಬ್ದ ಮಾಲಿನ್ಯದ ಬಗ್ಗೆ ಕೋರ್ಟ್ ಆದೇಶದಂತೆ ಸರ್ಕಾರದ ನಿಯಮ ರೂಪಿಸಲಿದೆ. ಅದರಂತೆ ಎಲ್ಲರು ಕೂಡ ಪಾಲನೆ ಮಾಡಬೇಕು ಎಂದಿದ್ದಾರೆ ಎಂದು ಖಾದರ್ ಹೇಳಿದ್ದಾರೆ. ನಿಯೋಗದಲ್ಲಿ ಶಾಸಕರಾದ ಎನ್.ಎ.ಹಾರಿಸ್, ನಝೀರ್ ಅಹ್ಮದ್ ಇದ್ದರು.
















ಇನ್ನಷ್ಟು ಸುದ್ದಿಗಳು
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ