ಬಾಗಲಕೋಟೆ: ಇದು ರಾಮ ಸೇನೆಯೋ, ರಾವಣ ಸೇನೆಯೋ? ಪ್ರಮೋದ್ ಮುತಾಲಿಕ್ನಂತವರನ್ನು ಒದ್ದು ಒಳಗಡೆ ಹಾಕದೇ ಹೋದರೇ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಶ್ರೀರಾಮ ಸೇನೆ ವಿರುದ್ಧ ಕಿಡಿಕಾರಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಆಝಾನ್ ವರ್ಸಸ್ ಸುಪ್ರಭಾತ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇಂತಹ ವಿಷಯಗಳು ಬೃಹದಾಕಾರವಾಗಿ ಬೆಳೆಯಲು ಸಕಾ೯ರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ನಿಲ್ಲಿಸಬೇಕು. ಸಮಾಜದ ಸಾಮರಸ್ಯ ಹಾಳಾದ ಮೇಲೆ ರಿಪೇರಿ ಮಾಡಲಿಕ್ಕಾಗುತ್ತಾ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಬೆಳಿಗ್ಗೆಯಿಂದ ನೋಡಿದ್ದೇನೆ. ಇದು ರಾಮ ಸೇನೆನೋ, ರಾವಣನ ಸೇನೆನೋ ಇದೊಂದು ಕಡೆ ಇರಲಿ. ಇವತ್ತಿನಿಂದ ಶುರು ಮಾಡಿದ್ದಾರಾ ಹನುಮಾನ ಚಾಲೀಸಾ? ಎಂದು ಪ್ರಶ್ನಿಸಿದ ಅವರು, ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಪ್ರಮಾಣದಲ್ಲಿ ಸ್ಪೀಕರ್ ಇರಲಿ. ಸರ್ಕಾರ ಇದಕ್ಕೆ ಪರ್ಮಿಷನ್ ಕೊಟ್ಟು ಬಿಡಲಿ. ಇದಕ್ಕೇನು ದೊಡ್ಡ ಪ್ರಚಾರದ ಅವಶ್ಯಕತೆ ಇಲ್ಲ ಎಂದರು.
ಹಿಂದುತ್ವ ಉಳಿಸೋಕೆ ಹನುಮಾನ ಚಾಲೀಸಾ ಹೇಳ್ತಿದ್ದಾರೆ ಅಂತ ಏನಿಲ್ಲ. ದಿನಂಪ್ರತಿ ಮನೆಯಲ್ಲಿ ನಾವು ಹೇಳೋಲ್ವೆ. ಏನಾದ್ರೂ ಸಮಸ್ಯೆ ಆದ್ರೆ, ಆರೋಗ್ಯ ತೊಂದರೆ ಆದ್ರೆ ಹನುಮಾನ್ ಚಾಲೀಸಾ ಹೇಳ್ತೀವಿ. ಇದೇನು ದೊಡ್ಡ ಸಾಧನೆ ಏನಲ್ಲ. ಸಮಾಜದಲ್ಲಿ ಬೆಂಕಿ ಇಡತಕ್ಕಂತವರಿದ್ದಾರಲ್ಲ, ಟಿವಿ ಮುಂದೆ ಮಾತನಾಡೋರು ಪ್ರಮೋದ ಮುತಾಲಿಕ್ ಅವ್ಯಾವೋ ಇದ್ದಾವಲ್ಲ. ಮೊದಲು ಇವರನ್ನು ಒದ್ದು ಒಳಗಡೆ ಹಾಕದೇ ಇದ್ದರೆ ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ನೆಲೆಸಲು ಕಷ್ಟ ಎಂದು ಹೇಳಿದರು.
ನಮಗೆ ಇದೆಲ್ಲಾ ಬೇಕಾಗಿಲ್ಲ. ಹೋದ ವರ್ಷದ ಬೆಳೆ ವಿಮೆ ದುಡ್ಡೇ ಬಂದಿಲ್ಲ. ಇದಕ್ಕೆ ನಮ್ಮ ಹೋರಾಟ ಇರಬೇಕು. ಏನು ಗಂಟೆ ಬಾರಿಸಿದರೆ ನಿಮಗೆಲ್ಲಾ ಸಿಕ್ಕಿ ಬಿಡುತ್ತಾ. ಈ ನಡುವೆ 120 ರೂ. ಪೆಟ್ರೋಲ್, 100 ರೂ. ಡಿಸೇಲ್, ಸಾವಿರ ರೂಪಾಯಿ ಗ್ಯಾಸ್ ರೇಟ್ ಆಗಿದೆ. ಈ ಬಗ್ಗೆ ನೀವ್ಯಾರು ಮಾತನಾಡೋಕೆ ರೆಡಿ ಇಲ್ಲ. ಈ ವಿಷಯ ಹಿಡಿದುಕೊಂಡು ನಾವು ಹೊರಟಿದ್ದೇವೆ. ಜನರು ಸಾಯುತ್ತಿದ್ದಾರೆ, ಜನರ ಜೀವನದ ಜತೆ ಆಟ ಆಡಬೇಡಿ. ಇದನ್ನು ಸರಿಪಡಿಸಬೇಕಾಗಿರೋದು ಹೋರಾಟಗಾರರ, ಸಂಘಟನೆಗಳ ಕರ್ತವ್ಯ ಎಂದು ತಿಳಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ