ಮಂಗಳೂರು: ಈ ದೇಶವು ಆದ್ಯಾತ್ಮಿಕ ನೆಲೆಗಟ್ಟು ಮತ್ತು ನಂಬಿಕೆಯಿಂದ ನಿಂತಿದೆ. ಭಾರತದ ಮುಸ್ಲಿಮರು ದೇವಾರಧಕರು ಮತ್ತು ಅಷ್ಟೇ ದೃಢವಾಗಿ ದೇಶ ಪ್ರೇಮಿಗಳು ಕೂಡ.ಮುಸ್ಲಿಮರಿಗೆ ಭಾರತದಲ್ಲಿ ಧರ್ಮವಿಲ್ಲದೆ ದೇಶವಿಲ್ಲ.
ಪ್ರತೀ ಮುಸ್ಲಿಮನ ಆರಾಧನೆಯು ಅಲ್ಲಾಹನಿಗೆ ಅರ್ಪಿತ. ಅಲ್ಲಾಹನ ಪ್ರಾರ್ಥನೆಗೆ ಇರುವ ಕರೆ ಅಝಾನ್ ಎಂಬುದು ನಿಸರ್ಗ ನಿಯಮ, ಈ ಕರೆಯನ್ನು ಹಿಂದೆಂದಿಗಿಂತಲೂ ಸಮರ್ಪಕವಾಗಿ , ಸ್ಪಷ್ಟವಾಗಿ ಮತ್ತು ಸುಂದರವಾಗಿ ಕರೆಯಲಾಗುವುದು. ದೇವ ಪ್ರಣಾಮದ ಕರೆಯನ್ನು ಸೀಮಿತಗೊಳಿಸುವ ಪ್ರಶ್ನೆಯೇ ಉದ್ಭವಿಸುವದಿಲ್ಲ.
ಅಲ್ಲಾಹನಿಗೆ ಪ್ರಾರ್ಥನೆಯ ಆಮಂತ್ರಣ ಕರೆ ಆಝಾನ್ ನ್ನು ಈ ಹಿಂದಿನಂತೆಯೇ ಕರೆಯುತ್ತೇವೆ. ಈ ನಿರ್ಧಿಷ್ಟ ಕರೆಯನ್ನು ಈ ಹಿಂದೆ, ತಡೆಯಲು ಅದೆಷ್ಟೋ ಕಿಂಕರರು ಪ್ರಯತ್ನಿಸಿದರೂ ನಿಸರ್ಗ ಮತ್ತು ಈ ಜಗದ ಸುವ್ಯವಸ್ಥೆಯು ಅಂತವರಿಗೆ ತಕ್ಕ ಪ್ರತ್ಯುತ್ತರ ನೀಡಿದೆ. ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲೂ ಅದೇ ಸಂಭವಿಸುವುದು.
ನಮಾಝ್ ಗಿರುವ ಅಝಾನ್ ಕರೆ ತಡೆಯಲು ಈ ಹಿಂದೆ ಪ್ರಯತ್ನಿಸಿದ ಮುತಾಲಿಕರ ಪೂರ್ವಜರಿಗೆ ಏನು ಶಾಸ್ತಿ ಆಗಿದೆಯೋ ಅದೇ ಮುತಾಲಿಕರ ಪ್ರಯತ್ನದಲ್ಲೂ ಸಂಭವಿಸಲಿದೆ. ದೇವ ಪ್ರಾರ್ಥನೆಯ ಕರೆಯನ್ನು ಪ್ರಶ್ನಿಸುವ ಮುತಾಲಿಕ್ ಸಂತತಿಯವರು ಈ ಬಗ್ಗೆ ನಿಗಾ ಹೊಂದುವುದು ಒಳಿತು. ಶಬ್ದ ಮಾಲಿನ್ಯ ಮತ್ತು ಶ್ರವಣ ಮಾಲಿನ್ಯದ ವ್ಯತ್ಯಾಸವನ್ನು ಅರಿಯುವುದು ಒಳಿತು ಎಂದು ಕೆ.ಅಶ್ರಫ್(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ