ಮಂಗಳೂರು: ಇಂದು ನಗರದಲ್ಲಿ ನಡೆದ ಮುಸ್ಲಿಮ್ ಸೆಂಟ್ರಲ್ ಕಮಿಟಿ ಮಂಗಳೂರು ಇದರ ಪತ್ರಿಕಾ ಗೋಷ್ಠಿ ಯಲ್ಲಿ, ಅಧ್ಯಕ್ಷರಾದ ಕೆ. ಎಸ್. ಮೊಹಮ್ಮದ್ ಮಸೂದ್ ರವರು ಸರಕಾರದ ಇಂದಿನ ದ್ವನಿವರ್ಧಕ ಮತ್ತು ಶಬ್ದ ಮಾಲಿನ್ಯದ ಬಗೆಗಿನ ಆದೇಶವನ್ನು ಮತ್ತು ಮುತಾಲಿಕ ರ ವಿದ್ವಂಸಕತೆ ಗಳನ್ನು ಪ್ರಸ್ತಾಪಿಸಿ ವಿವರವಾಗಿ ಮಾತನಾಡಿದ್ದಾರೆ.
ದ್ವನಿವರ್ಧಕ ಬಳಕೆಯ ಬಗ್ಗೆ ಧಾರ್ಮಿಕ ಕೇಂದ್ರಗಳಲ್ಲಿ ಸರಕಾರದ ನಿರ್ದೇಶನ ಪಾಲಿಸಲಾಗುವುದು ಎಂದು ಹೇಳಿಕೆ ನೀಡುವುದರೊಂದಿಗೆ , ಕೆ. ಎಸ್.ಮೊಹಮ್ಮದ್ ಮಸೂದ್ ರವರು ಖುದ್ದು ಅಧ್ಯಕ್ಷರಾಗಿರುವ ಮಂಗಳೂರಿನ ಕುದ್ರೋಳಿ ಜಾಮಿಯಾ ಮಸೀದಿ ಬಗ್ಗೆ ಪ್ರಾಸ್ತಾವಿಸಿ, ದ್ವನಿವರ್ಧಕದ ಉಪಯೋಗವನ್ನು ಅವರು ಅಧ್ಯಕ್ಷರಾಗಿರುವ ಮಸೀದಿಯಲ್ಲಿ ದಿನದ ನಂತರ ಐದು ಹೊತ್ತಿನ ಆಝಾನ್ ಕರೆಯನ್ನು ನಿಲ್ಲಿಸಲಾಗುವುದು ಎಂದು ಅವರು ಸಾಂದರ್ಭಿಕವಾಗಿ ನೀಡಿದ ಇನ್ನೊಂದು ಹೇಳಿಕೆಯು, ಅವರ ಮಸೀದಿಗೆ ಮಾತ್ರ ಸೀಮಿತವಾಗಿದೆ.
ಅದು ಅವರು ಅಧ್ಯಕ್ಷರಾಗಿರುವ ಮಸೀದಿಯ ವಿಷಯವೇ ಹೊರತು ಮುಸ್ಲಿಮ್ ಸೆಂಟ್ರಲ್ ಕಮಿಟಿಯ ನಿರ್ಣಯದ ಹೇಳಿಕೆ ಅಲ್ಲ,ಎಂದು ಈ ಮೂಲಕ ಸ್ಪಷ್ಟೀಕರಣ ನೀಡುವುದಾಗಿ ಕೆ.ಅಶ್ರಫ್
(ಉಪಾಧ್ಯಕ್ಷರು. ದಿ ಮುಸ್ಲಿಮ್ ಸೆಂಟ್ರಲ್ ಕಮಿಟಿ.ಮಂಗಳೂರ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್