ದುಬೈ | ಯುಎಇ ಅಧ್ಯಕ್ಷ ಶೈಖ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಅವರು 2004 ರಿಂದ ಯುಎಇ ಅಧ್ಯಕ್ಷರಾಗಿದ್ದಾರೆ. ಅಬುಧಾಬಿಯ ಆಡಳಿತಗಾರ ಮತ್ತು ಯುಎಇ ಸಶಸ್ತ್ರ ಪಡೆಗಳ ಮುಖ್ಯಸ್ಥರೂ ಆಗಿದ್ದರು.
ಅವರ ನಿಧನ ವಾರ್ತೆಯನ್ನು ಯುಎಇ ಅಧ್ಯಕ್ಷೀಯ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿದೆ. ನಿಧನ ಪ್ರಯುಕ್ತ ಯುಎಇಯಲ್ಲಿ 40 ದಿನಗಳ ಅಧಿಕೃತ ಶೋಕಾಚರಣೆಯನ್ನು ಘೋಷಿಸಲಾಗಿದೆ.
ಶೈಖ್ ಖಲೀಫಾ ಬಿನ್ ಝಾಯಿದ್ ನಿಧನಕ್ಕೆ ಯುಎಇ ಪ್ರಧಾನಮಂತ್ರಿ, ದುಬೈ ಆಡಳಿತಗಾರ ಶೈಖ್ ಮುಹಮ್ಮದ್ ಬಿನ್ ರಾಶಿದ್ ಆಲ್ ಮತ್ತೂಮ್, ಅಬುಧಾಬಿ ಯುವರಾಜ ಶೈಖ್ ಮುಹಮ್ಮದ್ ಬಿನ್ ಝಾಯಿದ್, ಸೌದಿ ಅರೇಬಿಯಾದ ದೊರೆ ಸಲ್ಮಾನ್ ಮತ್ತು ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಸಂತಾಪ ಸೂಚಿಸಿದ್ದಾರೆ.
1971 ರಲ್ಲಿ ಯುಎಇ ಸ್ಥಾಪನೆಯಾದಾಗಿನಿಂದ ನವೆಂಬರ್ 2, 2004 ರಂದು ನಿಧನರಾಗುವ ವರೆಗೂ ಯುಎಇಯ ಮೊದಲ ಅಧ್ಯಕ್ಷರಾಗಿ ಕಾರ್ಯಾಚರಿಸಿದ್ದ, ಶೈಖ್ ಝಾಯಿದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಉತ್ತರಾಧಿಕಾರಿಯಾಗಿ ಶೈಖ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್ ಯುಎಇ ಅಧ್ಯಕ್ಷರಾದರು.
ಶೇಖ್ ಖಲೀಫಾ ಅವರು ಸೆಪ್ಟೆಂಬರ್ 7, 1948 ರಂದು ಅಲ್ ಐನ್ನ ಅಲ್ ಮುವೈಜಿ ಫೋರ್ಟ್ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ನ ಸ್ಥಾಪಕ ಶೈಖ್ ಝಾಯಿದ್ ಬಿನ್ ಸುಲ್ತಾನ್ ಆಲ್ ನಹ್ಯಾನ್ ಅವರ ಹಿರಿಯ ಪುತ್ರನಾಗಿ ಜನಿಸಿದರು. ಶೈಖಾ ಹಸ್ಸಾ ಬಿಂತ್ ಮುಹಮ್ಮದ್ ಬಿನ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್ ಅವರು ತಾಯಿ.
ಅವರು ಶೇಖಾ ಶಮ್ಸಾ ಬಿಂತ್ ಸುಹೈಲ್ ಆಲ್ ಮಸ್ರೂಯಿ ಅವರನ್ನು ವಿವಾಹವಾದರು. ಅವರಿಗೆ ಆರು ಹೆಣ್ಣುಮಕ್ಕಳು ಸೇರಿದಂತೆ ಎಂಟು ಮಕ್ಕಳಿದ್ದಾರೆ.
ಯುಎಇಯ ಎರಡನೇ ಅಧ್ಯಕ್ಷ ಮತ್ತು ಅಬುಧಾಬಿ ಎಮಿರೇಟ್ನ 16 ನೇ ಆಡಳಿತಗಾರ ಶೈಖ್ ಖಲೀಫಾ ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶೈಖ್ ಖಲೀಫಾ ಅವರ ಆಳ್ವಿಕೆಯಲ್ಲಿ ಯುಎಇ ತ್ವರಿತ ಅಭಿವೃದ್ಧಿಗೆ ಸಾಕ್ಷಿಯಾಗಿದೆ. ತನ್ನ ತಂದೆ ಶೈಖ್ ಝಾಯಿದ್ ಸ್ಥಾಪಿಸಿದ ಮಾರ್ಗವನ್ನು ಮುಂದುವರಿಸುವುದು ಅವರ ಗುರಿಯಾಗಿತ್ತು.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್