ಬೆಳ್ತಂಗಡಿ, ಮೇ-19: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜಾರ ಬೆಳ್ತಂಗಡಿಯ ಕಚೇರಿಯಿಂದ ಚೀಲದಲ್ಲಿ ದೊಡ್ಡ ಮೊತ್ತದ ಹಣವನ್ನು ಪೂಂಜಾರವರು ತರುದನ್ನು ನಾನು ಕಣ್ಣಾರೆ ಕಂಡಿದ್ದೇನೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಹೇಳಿಕೆ ನೀಡಿರುವುದು ವಿವಾದವೆಬ್ಬಿಸಿದೆ. ಈ ಬಗ್ಗೆ ತನಿಖೆಯಾಗಲಿ ಎಂದು ಎಸ್ಡಿಪಿಐ ಆಗ್ರಹಿಸಿದೆ.
ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಭಜನಾ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತ ಹರೀಶ್ ವೈ ಚಂದ್ರಮ ಬಳಂಜರವರು ತಮ್ಮ ಭಾಷಣದಲ್ಲಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜಾರ ಮನೆಗೆ ಬರುವ ಸಾರ್ವಜನಿಕರಿಗೆ ಕಂತೆ ಕಂತೆ ಹಣವನ್ನು ನೀಡುತ್ತಾರೆ. ಅದೇ ರೀತಿ ಹರೀಶ್ ಪೂಂಜಾರ ಬೆಳ್ತಂಗಡಿಯ ಕಚೇರಿ ಶ್ರಮಿಕದಲ್ಲಿ ದಿನಾಂಪ್ರತಿ ಕಚೇರಿ ಒಳಗಿನಿಂದ ಚೀಲದಲ್ಲಿ ದೊಡ್ಡ ಮೊತ್ತದ ಹಣವನ್ನು ಪೂಂಜಾರವರು ತರುದನ್ನು ನಾನು ಕಣ್ಣಾರೆ ಕಂಡ ವ್ಯಕ್ತಿಯಾಗಿದ್ದೇನೆ ಎಂದು ಹೇಳಿರುತ್ತಾರೆ.
ಶಾಸಕರಿಗೆ ಇಷ್ಟು ಹಣ ಎಲ್ಲಿಂದ ಹೇಗೆ ಬರುತ್ತದೆ.? ಶಾಸಕರ ತಿಂಗಳ ಸಂಬಳದಲ್ಲಿ ಇಷ್ಟು ಹಣ ನೀಡಲು ಸಾಧ್ಯವೇ.? ಶಾಸಕರಾಗುವ ಮೊದಲು ವಕೀಲ ವೃತ್ತಿಯನ್ನು ಅವಲಂಬಿಸಿದ್ದ ವ್ಯಕ್ತಿ ಶಾಸಕರಾದ ನಂತರ ಇಷ್ಟೊಂದು ಹಣ ಹೇಗೆ ಸಂಪಾದಿಸಿದರು? ರಾಜ್ಯದಲ್ಲಿ ನಡೆಯುತ್ತಿರುವ 40% ಕಮಿಷನ್ ದಂದೆಯ ಹಣ ಶಾಸಕರಿಗೆ ಸಂದಾಯವಾಗಿದೆ ಎಂಬ ಅನುಮಾನ ಕ್ಷೇತ್ರದ ಜನತೆಗೆ ಕಾಡುತ್ತಿದೆ. ಶಾಸಕ ಹರೀಶ್ ಪೂಂಜಾರ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಹಣದ ಮೂಲದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ನಿಸಾರ್ ಕುದ್ರಡ್ಕ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ