ಮಡಿಕೇರಿ: ಕೊಡಗು ಜಿಲ್ಲೆಯ ಸುನ್ನೀ ಸಂಘಟನೆಗಳ ಒಕ್ಕೂಟವಾದ “ಸುನ್ನೀ ಸಮನ್ವಯ ಸಮಿತಿ”ವತಿಯಿಂದ ನೆನ್ನೆ (21-05-2022) ಮಡಿಕೇರಿಯ ಅಲ್ ವೆಸಲ್ ಹಾಲ್ನಲ್ಲಿ ಜಿಲ್ಲೆಯ ಹಲವು ಮೊಹಲ್ಲಾಗಳ ಪ್ರತಿನಿಧಿಗಳು ಹಾಗೂ ಖತೀಬರನ್ನು ಒಳಗೊಂಡ ಮೊಹಲ್ಲಾ ಸಂಗಮ ನಡೆಸಲಾಯಿತು.
ಮೈಕ್ಗಳಲ್ಲಿ ಅಝಾನ್ ಕೊಡುವುದರ ಕುರಿತು ನಡೆದ ಕಾರ್ಯಾಗಾರದಲ್ಲಿ ಸಹಾಯಕ ಖಾಝಿಗಳಾದ ಎಂ ಎಂ ಅಬ್ದುಲ್ಲ ಫೈಝಿ ಅಧ್ಯಕ್ಷತೆ ವಹಿಸಿದ್ದರು ಮತ್ತು ಮತ್ತೊಂದು ಸಹಾಯಕ ಖಾಝಿಗಳಾದ ಕೆ ಎಸ್ ಶಾದುಲಿ ಫೈಝಿ ಉದ್ಘಾಟನೆ ನೆರವೇರಿಸಿದರು.
ಜಿಲ್ಲಾಧಿಕಾರಿಗಳಾದ ಸತೀಶ್ ಮಾತನಾಡಿ ಮೇ 25ರ ಒಳಗಾಗಿ ಪ್ರತೀ ಮಸೀದಿಗಳಲ್ಲೂ ಧ್ವನಿವರ್ಧಕ ಬಳಕೆಗೆ ಅನುಮತಿ ಪಡೆಯಲು ನಿರ್ದೇಶಿಸಿದರಲ್ಲದೆ ಪ್ರಸ್ತುತ ಸುತ್ತೋಲೆಯು ಕೇವಲ ಅಝಾನ್ಗೆ ಮಾತ್ರವಲ್ಲ ಮೈಕ್ ಬಳಸಿ ನಡೆಸುವ ಎಲ್ಲಾ ಕಾರ್ಯಗಳಿಗೂ ಅನ್ವಯವಾಗಲಿದೆ ಸದ್ಯಕ್ಕೆ ಕಠಿಣ ಕ್ರಮ ಕೈಗೊಳ್ಳುವ ತೀರ್ಮಾನವಿಲ್ಲ ಎಂದರು.
ಪರಿಸರ ಇಲಾಖೆಯ ಅಧಿಕಾರಿಗಳು,ಮಡಿಕೇರಿ ಡಿವೈಎಸ್ಪಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಸರ್ಕಾರ ಹೊರಡಿಸಿರುವ ಸುತ್ತೋಲೆಯ ಕುರಿತು ವಿಷಯ ಮಂಡಿಸಿ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿ ಹಲವು ಸಂಶಯಗಳಿಗೆ ಪರಿಹಾರ ನೀಡಿದರು.
ಜಿಲ್ಲೆಯ ಎರಡೂ ವಿಭಾಗಗಳ ಜಂಇಯ್ಯತುಲ್ ಉಲಮಾ ಹಾಗೂ ಮುಸ್ಲಿಂ ಜಮಾಅತ್ ,ಎಸ್ವೈಎಸ್, ಎಸ್ಜೆಎಂ, ಎಸ್ಎಸ್ಎಫ್,ಎಸ್ಕೆಎಸ್ಎಸ್ಎಫ್, ಇನ್ನಿತರ ಸುನ್ನೀ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.




















ಇನ್ನಷ್ಟು ಸುದ್ದಿಗಳು
ಫೆ.21(ನಾಳೆ)ರಿಂದ ಇತಿಹಾಸ ಪ್ರಸಿದ್ಧ ಕೊಡಗು ಎಮ್ನೆಮ್ಮಾಡು ಮಖಾಂ ಉರೂಸ್ ಆರಂಭ
ಹಲೀಮ ಅಲ್ ಕಿಂದಿ ವುಮೆನ್ಸ್ ಅಕಾಡೆಮಿ’ಮರ್ಕಝ್ ಕೊಟ್ಟಮುಡಿ’ – ದ್ವಿತೀಯ ಪಿಯುಸಿಗೆ ಶೇ100 ಫಲಿತಾಂಶ
SYS 30ನೇ ವಾರ್ಷಿಕ ಸಮ್ಮೇಳನ ಪ್ರಚಾರ- ಕೊಡಗು ಜಿಲ್ಲಾ ಉಲಮಾ ಸಂಗಮ
ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಸಮಿತಿ- ನೂತನ ಸಾರಥಿಗಳು
‘ಪರಂಪರೆಯ ಪ್ರತಿನಿಧಿಗಳಾಗೋಣ’ : ಸಿದ್ಧಾಪುರದಲ್ಲಿ ನಡೆದ ಅದ್ದೂರಿ ಎಸ್ ವೈ ಎಸ್ ಯುವಜನೋತ್ಸವ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಅಶಾಂತಿ ಉಂಟು ಮಾಡುವವರಿಗೆ ಕಠಿಣ ಶಿಕ್ಷೆಯಾಗಲಿ: ಎಸ್ಸೆಸ್ಸೆಫ್ ಕೊಡಗು
ಕೊಡಗು ಎಸ್ಸೆಸ್ಸೆಫ್ ಕ್ಯಾಂಪಸ್ ಅಸ್ಸೆಂಬ್ಲಿ ಯಶಸ್ವಿ ಸಮಾಪ್ತಿ
ಮರ್ಕಝುಲ್ ಹಿದಾಯ ಕೊಟ್ಟಮುಡಿ- ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಕುಶಾಲನಗರ :ಗೂಂಡಾಗಳಿಂದ ಹಲ್ಲೆಗೊಳಗಾದ ರಾಝಿಕ್ ನನ್ನು ಭೇಟಿಯಾದ ಎಸ್ಸೆಸ್ಸೆಫ್ ಜಿಲ್ಲಾ ನಾಯಕರು
ಹಾಸ್ಟೆಲ್ ಗೆ ನುಗ್ಗಿ ಎಸ್ಸೆಸ್ಸೆಫ್ ಕಾರ್ಯಕರ್ತನ ಮೇಲೆ ಹಲ್ಲೆ- ಕೊಡಗು ಜಿಲ್ಲಾ ಸಮಿತಿ ಖಂಡನೆ