ಮಂಗಳೂರು: ಕರ್ನಾಟಕ ಸರಕಾರ ಶಬ್ದ ಮಾಲಿನ್ಯ ನಿಯಂತ್ರಣಕ್ಕಾಗಿ ಧ್ವನಿವರ್ಧಕ ಶಬ್ದ ಮಿತಿಯ ಬಗ್ಗೆ ಈಗಾಗಲೇ ಸುತ್ತೋಲೆ ಪ್ರಕಟಿಸಿದ ಹಿನ್ನೆಲೆಯಲ್ಲಿ, ಅಧೀನ ಇಲಾಖೆಗಳು, ಜಿಲ್ಲಾ ಮಟ್ಟದಲ್ಲಿ ಅಥವಾ ನಗರ ಆಯುಕ್ತಾಲಯ ಮಟ್ಟದಲ್ಲಿ ಈ ಹಂತದವರೆಗೆ ಸ್ಪಷ್ಟ ನಿಲುವು ಮತ್ತು ನಡೆ ಹೊಂದಲು ಸಾಧ್ಯವಾಗಿಲ್ಲ.
ಸುತ್ತೋಲೆಯ ಆಧಾರದಲ್ಲಿ ಸಮಿತಿ ರಚಿಸಿದ ಬಗ್ಗೆ ಇಲಾಖೆಗಳಿಂದ ಅಧಿಕೃತ ಪ್ರಕಟಣೆ ಬಂದಿಲ್ಲ. ಸ್ಥಳೀಯ ಪೊಲೀಸು ಇಲಾಖೆ ಮಟ್ಟದಲ್ಲಿ ಕೆಲವು ಕಡೆ ಸಾರ್ವಜನಿಕರನ್ನು ಸೇರಿಸಿ ಸಭೆ ನಡೆಸಿ ಮಾಲಿನ್ಯ ತಡೆ ಅನುಷ್ಟಾನಿಸಲು ಕೋರಲಾಗಿದೆ.ಈ ಬಗ್ಗೆ ಲಿಖಿತ ನೋಟೀಸು ಜಾರಿ ಆಗಲಿಲ್ಲ.
ಈ ಮದ್ಯೆ ವಕ್ಫ್ ಅಧ್ಯಕ್ಷರು ಪತ್ರಿಕಾ ಹೇಳಿಕೆ ನೀಡಿ ಸಂಬಂಧಿತ ಇಲಾಖೆ, ಧಾರ್ಮಿಕ ಮುಖಂಡರಲ್ಲಿ ಮಾತುಕತೆ ನಡೆಸಿ ಈ ಬಗ್ಗೆ ಸ್ಪಷ್ಟ ನಿಲುವು ಹೊಂದುವುದಾಗಿ ಹೇಳಿಕೆ ನೀಡಿರುತ್ತಾರೆ.
ಮುಂದುವರಿದು, ಸ್ಥಳೀಯ ಪ್ರಮುಖ ಅಲ್ಪ ಸಂಖ್ಯಾತ ಜನ ಪ್ರತಿನಿಧಿಗಳು ಈ ಬಗ್ಗೆ ಇಲಾಖೆ, ಜಿಲ್ಲಾಡಳಿತ ಮತ್ತು ಧಾರ್ಮಿಕ ಸಂಸ್ಥೆಗಳ ಸಮನ್ವಯ ಸಭೆ ನಡೆಸುತ್ತಾರೆ ಎಂದು ಹೇಳಿರುತ್ತಾರೆ. ಅದರಂತೆಯೇ,ಜಿಲ್ಲಾಧಿಕಾರಿಗಳು ಶೀಘ್ರ ಸಭೆ ಕರೆಯುವುದು ಎಂದು ನಿಖರ ಮಾಹಿತಿ ಇದೆ.
ಆದುದರಿಂದ, ಧಾರ್ಮಿಕ ಸಂಸ್ಥೆಯ ಆಡಳಿತ ಮುಖ್ಯಸ್ಥರು ಈ ಬಗ್ಗೆ ಯಾವುದೇ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ (ಮಾಜಿ ಮೇಯರ್) ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ