ಮಂಗಳೂರು: ಮಳಲಿಯ ಅತಿ ಪುರಾತನ ಮಸೀದಿಯ ವಿಸ್ತೃತ ಕಟ್ಟಡದ ನವೀಕರಣ ಕಾಮಗಾರಿ ಆರಂಭಿಸುವಾಗ, ಪುರಾತನ ರಚನೆಯ ವಾಸ್ತು ಶಿಲ್ಪವನ್ನು ವೀಕ್ಷಿಸಿ, ದೇವಸ್ಥಾನವೆಂದು ರದ್ದಾಂತವೆಬ್ಬಿಸಿದ, ಸಂಘೀ, ಕೃಪಾ, ನಿಖೇತನಿಗಳಿಗೆ, ತಮ್ಮ ಮುಸ್ಲಿಮರ ಮೇಲಿನ ವಿದ್ವೇಶವನ್ನು ಕರಾವಳಿ ಜಿಲ್ಲೆಗಳಲ್ಲಿ ಮತ್ತಷ್ಟು ಹಬ್ಬಿಸಿ ಶತಾಯ ಗತಾಯ ಒಂದು ಬೃಹತ್ ಕೋಮು ಗಲಭೆಯನ್ನು ಸೃಷ್ಟಿಸಲು ಸಂಘ ಪರಿವಾರ ಪ್ರಯತ್ನ ನಡೆಸುತ್ತಿದೆ.
ಆ ಮೂಲಕ ಇಲ್ಲಿನ ಹಿಂದುಳಿದ ವರ್ಗ, ದಲಿತರು, ಪರಿಶಿಷ್ಟರು, ಬುಡಕಟ್ಟು ಜನರು, ಮುಸ್ಲೀಮರ ಮದ್ಯೆ ಭಿನ್ನತೆ ಸೃಷ್ಟಿಸುವುದಾಗಿದೆ ಇವರ ಉದ್ದೇಶ.
ಈಗಾಗಲೇ ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧ ಚಿತ್ರ, ಪಠ್ಯ ಇತ್ಯಾದಿ ವಿವಾದದಲ್ಲಿ ಸಿಲುಕಿ ಹಾಕಿಕೊಂಡು ದ.ಕ.ಜಿಲ್ಲೆಯ ಸುಮಾರು ನಾಲ್ಕು ಲಕ್ಷ ಬಿಲ್ಲವರ ದ್ವೇಷವನ್ನು ಕಟ್ಟಿಕೊಂಡ ಬಿಜೆಪಿ ಸಂಘಿಗಳಿಗೆ, ಸ್ವಘೋಷಿತ ಹಿಂದೂ ನಾಯಕ ಎಂದು ಕರೆಸಿ ಕೊಳ್ಳುತ್ತಿರುವ ಶರಣ್ ಪಂಪ್ ವೆಲ್ ರನ್ನು ಮಳಲಿ ಮಸೀದಿ ವಿವಾದದಲ್ಲಿ ಮುಂದೆ ಹಾಕಿ, ಪ್ರಚೋದಿತ ಹೇಳಿಕೆ ಕೊಡಿಸಿ ಗಲಭೆಗೆ ಪ್ರಯತ್ನಿಸಲಾಗುತ್ತಿದೆ.
ಈಗಾಗಲೇ ಹಿಂದುಳಿದ ವರ್ಗದ ಜನರಿಗೆ, ಈ ಸಂಘಿಗಳು ,ಅವರ ಆರಾಧನಾ ಹಕ್ಕುಗಳನ್ನು ಕಸಿದು, ಅವರನ್ನು ಗುಲಾಮ ಸ್ಥಿತಿಗೆ ತಂದು, ಕೈಯಲ್ಲಿ ತ್ರಿಶೂಲ, ಬಂದೂಕು ಕೊಟ್ಟು ಸಮಾಜ ಘಾತುಕ ಶಕ್ತಿಯಾಗಿ ಮಾರ್ಪಡಿಸಲು ಪ್ರಯತ್ನಿಸಿರುತ್ತಾರೆ.
ಆರ್ಯ ಸಂತತಿಯ ಮುತಾಲಿಕ್ ಈಗಾಗಲೇ ಉತ್ತರ ಕರ್ನಾಟಕದಲ್ಲಿ ಜನರ ಜೀವನಕ್ಕೆ ಕೊಳ್ಳಿ ಇಡಲು ಪ್ರಯತ್ನಿಸಿ ಗಲಭೆ ನಡೆಸಲು ವಿಫಲವಾಗಿ ದ.ಕ.ಜಿಲ್ಲೆಗೆ ವಕ್ಕರಿಸಿ ಈ ಹಿಂದುಳಿದ ವರ್ಗದ, ವಿಶ್ವ ಹಿಂದೂ ಪರಿಷತ್ ನಿಯಂತ್ರಿತ ಶರಣ್ ಪಂಪ್ ವೆಲ್ ರನ್ನು ಇಲ್ಲಿನ ಮುಸ್ಲಿಮರ ವಿರುದ್ದ ಇಳಿಸಿದ್ದಾರೆ.ಹಿಂದುಳಿದ ವರ್ಗದ ಶರಣ್ ಏನಾದರೂ ಅಂದು ಮಳಲಿ ಮಸೀದಿಗೆ ಪರಿಶೀಲನೆಗೆ ಪ್ರವೇಶಿಸಿದಂತೆ ಯಾವುದಾದರೂ ಆರ್ಯರ ಧಾರ್ಮಿಕ ಕೇಂದ್ರ ಪ್ರವೇಶಿಸಿದ್ದರೆ ಅಂದೇ ಅಂತಹ ಧಾರ್ಮಿಕ ಕೇಂದ್ರದಿಂದ ಇದೇ ಶರಣನನ್ನು ಬಹಿಷ್ಕಾರ ಮಾಡುತ್ತಿದ್ದರು.
ಇದು ಸಂಘೀ ಮನಸ್ಥಿತಿ. ಬಹುಶಃ ಹಿಂದುಳಿದ ವರ್ಗದ ಶರಣ್ ತನ್ನ ಪರಿವಾರದಲ್ಲಿ ಆರಾಧನಾ ಹಕ್ಕಿನಿಂದ ವಂಚಿತನಾಗಿದ್ದಾನೆ. ಆದುದರಿಂದಲೇ ಇತರ ಧರ್ಮದ ಆರಾಧನಾ ಕೇಂದ್ರ ಗಳತ್ತ ಆಕರ್ಷಿತನಾಗಿ ಈ ರೀತಿಯ ವಿವಾದ ಸೃಷ್ಟಿಸುತ್ತಿದ್ದಾರೆ.
ಶರಣ್ ಸಂಘಿಗಳ ಆಳು ಆಗಿರಬಹುದು, ಆದರೆ ಇತರ ಧರ್ಮದ ಆರಾಧನಾಲಯದ ವಿಷಯದಲ್ಲಿ ಕಾನೂನು ಪ್ರಕ್ರಿಯೆಯಿಂದ ಹೆಚ್ಚಿನ ಕೃತ್ಯ ನಡೆಸಿದರೆ, ಶರಣ್ ಅಂತಹ ಪ್ರಯತ್ನಕ್ಕೆ ಹೆಚ್ಚಿನ ಬೆಲೆ ತೆರಬೇಕಾಗುತ್ತದೆ. ಮುಸ್ಲಿಮ್ ಧಾರ್ಮಿಕ ಸಂಕೇತಗಳನ್ನು, ಭೀಕರವಾಗಿ ಬಿಂಬಿಸಿ, ಇತರರಲ್ಲಿ ಭಯ ಹುಟ್ಟಿಸಿ, ಹಿಂದೂ ಧರ್ಮಕ್ಕೆ ಅಪಾಯವಿದೆ, ಇತ್ಯಾದಿಯಾಗಿ ಸರ್ವ ಪ್ರಯತ್ನದ ಮೂಲಕ ಕರಾವಳಿಯಲ್ಲಿ ಮುಸ್ಲಿಮ್ ವಿರೋಧಿ ಗಲಭೆ ನಡೆಸಲು ವಿಫಲವಾದಾಗ, ಇನ್ನೂ ಯಾವುದೇ ಮುಸ್ಲಿಮ್ ಧಾರ್ಮಿಕ ಸಂಕೇತಗಳು, ಲಭ್ಯವಿಲ್ಲದ ಕಾರಣ ಮಳಲಿ ಮಸೀದಿಯ ವಾಸ್ತುಶಿಲ್ಪಕ್ಕೆ ಹಸ್ತಕ್ಷೇಪ ನಡೆಸಿ, ಅದು ಇತರ ಧರ್ಮದ ಧಾರ್ಮಿಕ ಕೇಂದ್ರ ಎಂಬಿತ್ಯಾದಿಯಾಗಿ ಇಲ್ಲದ ಸಮಸ್ಯೆಯನ್ನು ಹುಟ್ಟು ಹಾಕಿ, ಜಿಲ್ಲೆಯಲ್ಲಿ ತಾಂಬೂಲ ಪ್ರಶ್ನೆ ಎಂಬ ಅವೈಜಾನಿಕ ಪದ್ಧತಿಗಳು ಇತ್ಯಾದಿ ಮೂಲಕ, ಪ್ರದೇಶದ ಶಾಂತಿ ಸುವ್ಯವಸ್ಥೆಯನ್ನು ಹಾನಿ ಗೊಳಿಸಿ ,ಗಲಭೆ ನಡೆಸಿ ಸಾಮಾನ್ಯ ಜನರ ಜೀವ, ಆಸ್ತಿಗಳನ್ನು ನಷ್ಟ ಮಾಡಲು ಮುಂದಾದ ದುಷ್ಕರ್ಮಿ ಗಳಾದ ಪ್ರಮೋದ್ ಮುತಾಲಿಕ್ ಮತ್ತು ಶರಣ್ ಪಂಪ್ವೆಲ್ ರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು.
ದ.ಕ.ಜಿಲ್ಲೆಯ ಜನರ ನೆಮ್ಮದಿಯ ಬಗ್ಗೆ ಮತ್ತು ಪೊಲೀಸು ಪರಿಕಲ್ಪನೆ ಜಿಲ್ಲೆಯಲ್ಲಿ ಜೀವಂತ ಇದೆ ಎಂದಿದ್ದರೆ ಪೊಲೀಸರು ಎಂದು ಹೇಳಿಸಿ ಕೊಳ್ಳುವವರು ತಕ್ಷಣ ಈ ದುಷ್ಕರ್ಮಿಗಳ ವಿರುದ್ದ ಕ್ರಮ ಕೈಗೊಂಡು ಪೊಲೀಸು ಪರಿಕಲ್ಪನೆಯ ಶುದ್ಧತೆಯನ್ನು ಪಾಲಿಸಲಿ.
ಕೆ.ಅಶ್ರಫ್ (ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ