ಕೊಚ್ಚಿ: ತೃಕ್ಕಾಕರ ಉಪಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿ ಉಮಾ ಥಾಮಸ್ ದಾಖಲೆಯ ಬಹುಮತದೊಂದಿಗೆ ಗೆಲುವು ಸಾಧಿಸಿದ್ದಾರೆ. ಯುಡಿಎಫ್ ಅಭ್ಯರ್ಥಿ ಉಮಾ ಥಾಮಸ್. 25,516 ಮತಗಳ ಮುನ್ನಡೆಯೊಂದಿಗೆ ಕ್ಷೇತ್ರದಲ್ಲಿ ಎಲ್ಡಿಎಫ್ ಅಭ್ಯರ್ಥಿ ಜೋ ಜೋಸೆಫ್ ಅವರನ್ನು ಸೋಲಿಸಿದರು.
ಎರ್ನಾಕುಲಂನ ಮಹಾರಾಜ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದೆ. ಅಂಚೆ ಮತಗಳಿಂದ ಹಿಡಿದು ಕೊನೆಯ ಮತಯಂತ್ರದಲ್ಲಿ ಮತ ಎಣಿಕೆಯವರೆಗೂ ಉಮಾ ಥಾಮಸ್ ಅವರನ್ನು ಹಿಂದಿಕ್ಕಲು ಎದುರಾಳಿಗಳಿಗೆ ಅವಕಾಶ ಸಿಗಲಿಲ್ಲ.
ಕೇರಳದ ಎರ್ನಾಕುಲಂ ಜಿಲ್ಲೆಯ ತ್ರಿಕ್ಕಕರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ದಾಖಲಿಸಿರುವ ಕಾಂಗ್ರೆಸ್ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕಾಂಗ್ರೆಸ್ ಶಾಸಕ ಪಿ.ಟಿ. ಥಾಮಸ್ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದೆ. ದಿವಂಗತ ಶಾಸಕರ ಪತ್ನಿ ಉಮಾ ಥಾಮಸ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತು. ಆಡಳಿತಾರೂಢ ಎಲ್ ಡಿಎಫ್ ಹೃದ್ರೋಗ ತಜ್ಞ ಡಾ.ಜೋ ಜೋಸೆಫ್ ರನ್ನು ಸ್ಪರ್ಧೆಗಿಳಿಸಿತ್ತು. ಬಿಜೆಪಿ ಕೂಡ ತನ್ನ ಅನುಭವಿ ನಾಯಕ ಎ.ಎನ್. ರಾಧಾಕೃಷ್ಣನ್ ರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು.
ಮತ ಎಣಿಕೆಯ ಆರಂಭದಿಂದಲೇ ಉಮಾ ಸ್ಪಷ್ಟ ಮುನ್ನಡೆ ಕಾಯ್ದುಕೊಂಡರು. ಪ್ರತಿ ಸುತ್ತಿನಲ್ಲಿ ತಮ್ಮ ಅಂತರವನ್ನು ಹೆಚ್ಚಿಸಿಕೊಂಡರು. 2016 ರಿಂದ ಕಾಂಗ್ರೆಸ್ ಭದ್ರಕೋಟೆಯನ್ನು ಪ್ರತಿನಿಧಿಸುತ್ತಿದ್ದ ಪಿ.ಟಿ. ಥಾಮಸ್ 2021 ರಲ್ಲಿ 14,300 ಮತಗಳ ಅಂತರದಿಂದ ಜಯ ಸಾಧಿಸಿದ್ದರು.ಆದರೆ ಅವರ ಪತ್ನಿ ಉಮಾ ಅವರು ಪತಿಗಿಂತ ಹೆಚ್ಚಿನ ಅಂತರದಿಂದ ಗೆದ್ದಿದ್ದಾರೆ.
1.96 ಲಕ್ಷ ಮತದಾರರ ಪೈಕಿ 1.35 ಲಕ್ಷ ಮಂದಿ ಮತದಾನ ಮಾಡಿದ್ದು, ಶೇ.68.77ರಷ್ಟು ಮತದಾನವಾಗಿದೆ.ಉಪಚುನಾವಣೆಯ ಮತದಾನದ ಪ್ರಮಾಣವು 2011 ರ ವಿಧಾನಸಭಾ ಚುನಾವಣೆಯ ನಂತರ ತುಲನಾತ್ಮಕವಾಗಿ ಕಡಿಮೆಯಾಗಿದೆ.
















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ