ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹಿಜಾಬ್ ಧಾರಿ ಸೋದರಿಯರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಬದಲಾಗಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದೇನೆ. ಆದರೆ ಆ ಪ್ರತಿಕ್ರಿಯೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿರುಚಿ ಅಪಪ್ರಚಾರ ಮಾಡುವ ಮೂಲಕ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿದ ಯು.ಟಿ.ಖಾದರ್, ನನ್ನ ಹೇಳಿಕೆಯನ್ನು ತಿರುಚುವ ಮೂಲಕ ಕೆಲವರು ದುರ್ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ವಿಘ್ನ ಸಂತೋಷಿಗಳು ಅವರ ವಿಕೃತ ಮನಸ್ಸನ್ನು ಅನಾವರಣಗೊಳಿಸುತ್ತಿದ್ದಾರೆ. ಹಿಜಾಬ್ ಧಾರಿ ಸಹೋದರಿಯರ ಬಗ್ಗೆ ನಾನು ಯಾವುದೇ ಹೇಳಿಕೆ ನೀಡಿಲ್ಲ. ನನ್ನ ಮಗಳೂ ಕೂಡ ಹಿಜಾಬ್ ಧರಿಸುತ್ತಾಳೆ ಎಂಬ ಪ್ರಜ್ಞೆ ನನಗಿದೆ.
ಆದರೆ ಕೆಲವು ಸ್ಥಾಪಿತ ಹಿತಾಸಕ್ತಿಗಳು ಹಿಜಾಬ್ ವಿಚಾರವನ್ನು ಮುಂದಿಟ್ಟುಕೊಂಡು ಆ ಸಮಸ್ಯೆಯನ್ನು ಬಗೆಹರಿಸದೆ ಅದನ್ನು ಸದಾಕಾಲ ಜೀವಂತವಾಗಿರಿಸಿ ಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
ಅಂತಹವರನ್ನು ಗಮನದಲ್ಲಿಟ್ಟುಕೊಂಡ ನಾನು ಈ ದೇಶದ ಕಾನೂನಿಗೆ ಗೌರವ ಕೊಡದೆ ಸಮಸ್ಯೆಯನ್ನು ಸೃಷ್ಟಿಸುವವರು, ಸೌದಿ ಅರೇಬಿಯಾ ಅಥವಾ ಪಾಕಿಸ್ತಾನಕ್ಕೆ ಹೋದಾಗ ಅಲ್ಲಿನ ಕಾನೂನಿನ ಆಳ ಅರಿವು ಆಗುತ್ತದೆ ಮತ್ತು ಭಾರತದ ಕಾನೂನಿನ ಸೌಂದರ್ಯವೂ ತಿಳಿಯಬಹುದಾಗಿದೆ ಎಂದು ಹೇಳಿದ್ದೇನೆಯೇ ವಿನಃ ಹಿಜಾಬ್ ಧಾರಿ ಸಹೋದರಿಯ ಮನಸ್ಸನ್ನು ನೋಯಿಸುವಂತಹ ಯಾವುದೇ ಹೇಳಿಕೆಯನ್ನೂ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ