ನವದೆಹಲಿ: ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಂತರ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಲವಾರು ರಾಷ್ಟ್ರಗಳು ತಮ್ಮಲ್ಲಿನ ಭಾರತೀಯ ರಾಯಭಾರಿಗೆ ಸಮನ್ಸ್ ನೀಡಿ ಈ ಬಗ್ಗೆ ತಮ್ಮ ಆಕ್ಷೇಪ ವ್ಯಕ್ತಡಿಸಿವೆ. ಇದರ ನಂತರ ಬಿಜೆಪಿಯು ನೂಪುರ್ ಶರ್ಮಾ ಅವರನ್ನು ಅಮಾನತು ಮಾಡಿದ್ದು, ಅವರ ವಿರುದ್ಧ ಎಫ್ಐಆರ್ ಕೂಡಾ ದಾಖಲಾಗಿದೆ.
ಇದೀಗ ನೂಪುರ್ ಶರ್ಮಾಗೆ ಬೆದರಿಕೆಗಳು ಬಂದ ಹಿನ್ನಲೆಯಲ್ಲಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ಭದ್ರತೆ ಒದಗಿಸಲಾಗಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ಹೇಳಿದ್ದಾರೆ. ಸೋಮವಾರದಂದು ನೂಪುರ್ ಅವರು ತನಗೆ ಬೆದರಿಕೆಗಳು ಬರುತ್ತಿದೆ ಎಂದು ಆರೋಪಿಸಿ, ಭದ್ರತೆಯನ್ನು ಕೋರಿದ್ದರು. ಇದನ್ನು ಅನುಸರಿಸಿ ದೆಹಲಿ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
“ತನಗೆ ಬೆದರಿಕೆಗಳು ಬರುತ್ತಿದೆ ಎಂದು ನೂಪುರ್ ಆರೋಪಿಸಿದ್ದರಿಂದ ಅವರಿಗೆ ಮತ್ತು ಅವರ ಕುಟುಂಬಕ್ಕೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಟಿವಿ ಚಾನೆಲ್ ಚರ್ಚೆಯ ಸಂದರ್ಭದಲ್ಲಿ ನೂಪುರ್ ಶರ್ಮಾ ಅವರು ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಅವರ ಈ ಹೇಳಿಕೆ ಇರಾನ್, ಸೌದಿ ಅರೇಬಿಯಾ, ಕತಾರ್, ಯುಎಇ, ಇಂಡೋನೇಷ್ಯಾ, ಜೋರ್ಡಾನ್ ಸೇರಿದಂತೆ ಹಲವಾರು ರಾಷ್ಟ್ರಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಭಾರಿ ರಾಜತಾಂತ್ರಿಕ ಗದ್ದಲಕ್ಕೆ ಕಾರಣವಾಗಿತ್ತು.
ನೂಪುರ್ ಅವರ ಹೇಳಿಕೆಗಳಿಂದ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಮತ್ತು ಅವರ ಪಕ್ಷವಾದ ಬಿಜೆಪಿ ದೂರ ಉಳಿದಿವೆ. ಅವರ ವಿವಾದಾತ್ಮಕ ಹೇಳಿಕೆಗೆ ಅವರನ್ನು ಪಕ್ಷದಿಂದ ಭಾನುವಾರ ಅಮಾನತುಗೊಳಿಸಲಾಗಿದೆ. ಅವರನ್ನು ಮಾತ್ರವಲ್ಲದೆ, ಅದೇ ವಿವಾದದಲ್ಲಿ ಬಿಜೆಪಿ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಅವರನ್ನು ಆರು ವರ್ಷಗಳಿಗೆ ಪಕ್ಷದಿಂದ ಉಚ್ಚಾಟಿಸಿದೆ.
ಈ ಮಧ್ಯೆ ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ ಮತ್ತು ಯಾವುದೇ ಧಾರ್ಮಿಕ ವ್ಯಕ್ತಿತ್ವವನ್ನು ಅವಹೇಳನ ಮಾಡುವುದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿಕೆ ನೀಡಿದೆ. ಇದರ ನಂತರ, ನೂಪುರ್ ಶರ್ಮಾ ಅವರು ತಮ್ಮ ವಿವಾದಾತ್ಮಕ ಹೇಳಿಕೆಯನ್ನು ಬೇಷರತ್ತಾಗಿ ಹಿಂತೆಗೆದುಕೊಂಡಿದ್ದಾರೆ.
ನೂಪುರ್ ಹೇಳಿಕೆಯನ್ನು ವಿರೋಧಿಸಿ ಜೂನ್ 3 ರಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದ್ದ ಬಂದ್ ವೇಳೆ ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಿದ್ದವು. ಈ ಘರ್ಷನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ