ಬೆಂಗಳೂರು: ಅರಬ್ ರಾಷ್ಟ್ರಗಳ ಪ್ರತಿಭಟನೆಗಳು ಫಲ ಕಂಡಿದೆ. ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಮಾಡಿದ ಧರ್ಮನಿಂದೆಯ ಹೇಳಿಕೆಗಳ ವಿವಾದದ ನಂತರ ಪಕ್ಷದಲ್ಲಿ ದ್ವೇಷದ ಭಾಷಣವನ್ನು ತಡೆಯಲು ಬಿಜೆಪಿ ಕ್ರಮ ಕೈಗೊಂಡಿದೆ.
ರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ಬಿಜೆಪಿ ನಾಯಕತ್ವವು ನಿಯಮಿತವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ನಾಯಕರ ಪಟ್ಟಿಯನ್ನು ಸಂಗ್ರಹಿಸಿದೆ. ಕಳೆದ ಎಂಟು ವರ್ಷಗಳಲ್ಲಿ 38 ನಾಯಕರು ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂದು ಪಕ್ಷವು ಕಂಡುಹಿಡಿದಿದೆ. ಇವುಗಳಲ್ಲಿ 27 ಭಾಷಣಕಾರರಿಗೆ ಅಂತಹ ಭಾಷಣಗಳನ್ನು ಮರುಕಳಿಸದಂತೆ ಪಕ್ಷದ ನಾಯಕತ್ವ ಎಚ್ಚರಿಕೆ ನೀಡಿದೆ ಎಂದು ವರದಿ ತಿಳಿಸಿದೆ.
ಏತನ್ಮಧ್ಯೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತಲೆದೋರಿರುವ ಧರ್ಮ ದಂಗಲ್ಗೂ ತೆರೆ ಎಳೆಯಲು ಹೈಕಮಾಂಡ್ ಮುಂದಾಗಿದೆ. ಈ ಸಂಬಂಧ ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳಿಗೆ ಬಿಜೆಪಿ ಹೈಕಮಾಂಡ್ ವಾರ್ನಿಂಗ್ ನೀಡಿದೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ಬಳಿಕ ರಾಷ್ಟ್ರೀಯ ಬಿಜೆಪಿ ಅಲರ್ಟ್ ಆಗಿದೆ. ಧರ್ಮ ದಂಗಲ್ಗೆ ತೆರೆ ಎಳೆಯಲು ಬಿಜೆಪಿಯಲ್ಲಿ ಪ್ರಯತ್ನ ನಡೆದಿದೆ. ನೂಪುರ್ ಶರ್ಮಾ ಉಚ್ಚಾಟನೆ ಮೂಲಕ ರಾಜ್ಯಗಳ ಬಿಜೆಪಿ ಘಟಕಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ. ಆ ಮೂಲಕ ಎಲ್ಲ ರಾಜ್ಯಗಳ ಬಿಜೆಪಿ ಘಟಕಗಳಿಗೆ ಹೈಕಮಾಂಡ್ ವಾರ್ನಿಂಗ್ ನೀಡಿದೆ.
ಧರ್ಮ ದಂಗಲ್ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸದಂತೆ ತಾಕೀತು ಮಾಡಿದೆ. ಮಸೀದಿ ಸೇರಿ ಇತರೆ ಧರ್ಮ ಸೂಕ್ಷ್ಮ ವಿಚಾರಗಳ ಕುರಿತು ಮಾತಾಡದಂತೆ ಹೈಕಮಾಂಡ್ ನಿರ್ದೇಶನ ನೀಡಿದೆ.
ಸಬ್ ಕಾ ಸಾತ್ ಸಬ್ ಕಾ ವಿಕಾಸ್ ನಿಲುವಿಗೆ ಧರ್ಮ ದಂಗಲ್ ಅಡ್ಡಿಯಾಗಿದೆ. ಇನ್ಮುಂದೆ ಧರ್ಮ ಸೂಕ್ಷ್ಮ ವಿಚಾರಗಳ ಬಗ್ಗೆ ಪಕ್ಷದ ಮುಖಂಡರು, ವಕ್ತಾರರು ಹೇಳಿಕೆಗಳನ್ನು ಕೊಡಬಾರದು. ಕೆಲವು ಪ್ರಕರಣಗಳಲ್ಲಿ ಹೇಳಿಕೆ, ಅಭಿಪ್ರಾಯ ಕೊಡಲೇಬೇಕಾದ ಅನಿವಾರ್ಯತೆ ಇದ್ದರೆ ಅದರ ಬಗ್ಗೆ ಮೊದಲೇ ಗಮನಕ್ಕೆ ತಂದು ಅನುಮತಿ ಪಡೆಯಬೇಕು ಎಂದು ಖಡಕ್ ಸೂಚನೆ ನೀಡಿದೆ.
ಹಿಜಾಬ್, ಹಿಂದೂ ದೇವಾಲಯ, ಮಸೀದಿ ಸೇರಿದಂತೆ ಅನೇಕ ವಿಚಾರಗಳಿಗಾಗಿ ಬಿಜೆಪಿ ಆಡಳಿತವಿರುವ ಅನೇಕ ರಾಜ್ಯಗಳಲ್ಲಿ ಧಾರ್ಮಿಕ ಸಂಘರ್ಷ ನಡೆಯುತ್ತಿದೆ. ಇದು ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಸಮರಕ್ಕೂ ಕಾರಣವಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ