ಮಹಾರಾಷ್ಟ್ರ,ಜೂ.9: ಮುಂಬಯಿ ಅಂದೇರಿ ನಗರದ ಮುಖ್ಯ ರಸ್ತೆಗಳ ಪಕ್ಕದ ಚರಂಡಿಗಳ ಮೇಲೆ ತಳ್ಳುಗಾಡಿ ಮೂಲಕ ವ್ಯಾಪಾರ ಸೇರಿದಂತೆ ಅಂಗಡಿ ಮುಂಗಟ್ಟುಗಳ ಶೆಡ್ ಹಾಕಿ ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಜನ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಿ ಮುಂಬಯಿ ಮಹಾನಗರ ಪಾಲಿಕೆ ಗುರುವಾರ ತೆರವು ಕಾರ್ಯಾಚರಣೆ ನಡೆಸಿತು.
ದಿನ ಕಳೆದಂತೆ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು, ಜನ ಸಂಚಾರಕ್ಕೊ ತೊಂದರೆ ಆಗುತ್ತಿರುವುದರಿಂದ ಹಲವಾರು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ರಸ್ತೆ ಆಕ್ರಮಿಸಿ ಕೊಂಡು
ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಅಧಿಕಾರಿಗಳು ಖಡಕ್ ವಾರ್ನಿಂಗ್ ಕೊಟ್ಟು ಅಂಗಡಿ ಮುಂಗಟ್ಟುಗಳನ್ನು ತೆರವು ಗೊಳಿಸಿದೆ.
ಬೀದಿ ಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.
ವರದಿ : ಮುಹಮ್ಮದ್ ಉಳ್ಳಾಲ್
ಮುಂಬಯಿ, ಅಂದೇರಿಯಿಂದ…